Gummata Nagari

Bijapur

ಸಿಂದಗಿ ಬೈ ಪಾಸ್ ಬಳಿ ಕಾರಿನಲ್ಲಿ 2 ಕೋಟಿ 93 ಲಕ್ಷ ಹಣ ಪತ್ತೆ

 

ಬಿಜಾಪುರ: ದೇಶದಲ್ಲಿ ಲೋಕಸಭಾ ಚುನಾವಣೆ ದಿನಾಂಕ ಕಳೆದ ಶನಿವಾರದಂದು ಚುನಾವಣಾ ಆಯೋಗ ಘೋಷಣೆ ಮಾಡಿದೆ. ಈ ಹಿನ್ನಲೆಯಲ್ಲಿ ಅಕ್ರಮ ಚಟುವಟಿಕೆ ತಡೆಗಟ್ಟಲು ಆಯೋಗ ನೀತಿ ಸಂಹಿತೆ ಜಾರಿ ಮಾಡಿದೆ. ಜಿಲ್ಲೆಯಲ್ಲೂ ಎಲ್ಲೆಡೆ ನೀತಿ ಸಂಹಿತೆ ಉಲ್ಲಂಘನೆಯಾಗದoತೆ ಜಿಲ್ಲಾ ಪೊಲೀಸ್ ಇಲಾಖೆ ಹದ್ದಿನ ಕಣ್ಣು ಇಟ್ಟಿದೆ. ಈ ನಡುವೆ ಕಾರಿನಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಬರೊಬ್ಬರಿ 2. ಕೋಟಿ 93 ಲಕ್ಷ ರೂಪಾಯಿ ನಗದು ಹಣವನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದೆ.

ಹೌದು, ನಗರದ ಹೊರ ವಲಯದ ಸಿಂದಗಿ ಬೈ ಪಾಸ್ ಬಳಿಯಲ್ಲಿ ಈ ಹಣವನ್ನು ಪೊಲೀಸರು ಪತ್ತೆ ಹಚ್ಚಿ, ಇಬ್ಬರು ಆರೋಪಿಗಳನ್ನು ಬಂಧಿಸಿ, ಬಂಧಿತರಿoದ ಮೊಬೈಲ್ ಮತ್ತು ಟೋಯೋಟೋ ಕಾರು ವಶಪಡಿಸಿಕೊಂಡಿದ್ದಾರೆ.

ಈ ಘಟನೆಯಲ್ಲಿ ಬಾಲಾಜಿ ನಿಕ್ಕಂ, ಸಚಿನ್ ಮೊಯಿತೆ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಈ ಆರೋಪಿಗಳು ಅಕ್ರಮ ಹಣವನ್ನು ಹೈದರಾಬಾದ್‌ನಿಂದ ತೆಗೆದುಕೊಂಡು ಸಿಂದಗಿ ಬೈಪಾಸ್ ಮೂಲಕ ಹುಬ್ಬಳ್ಳಿಗೆ ಸಾಗುತ್ತಿದ್ದ ಸಂದರ್ಭದಲ್ಲಿ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಗೋಳಗುಮ್ಮಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆಯನ್ನು ಮುಂದುವರೆಸಿದ್ದಾರೆ.

Most Popular

To Top
error: Content is protected !!