Gummata Nagari

Bijapur

ಧೂಳಖೇಡ ಚೆಕ್ ಪೋಸ್ಟ್ ನಲ್ಲಿ 4.5 ಲಕ್ಷ ನಗದು ವಶ

ಚಡಚಣ: ಲೋಕಸಭಾ ಚುನಾವಣಾ ಹಿನ್ನಲೆ ಮಹಾರಾಷ್ಟ್ರ ರಾಜ್ಯದ ಮುಖಾಂತರ ಕರ್ನಾಟಕ ರಾಜ್ಯಕ್ಕೆ ಒಳಗೆ ಬರುವ ಪ್ರತಿಯೊಂದು ವಾಹನಗಳ ಮೇಲೆ ತಪಾಸಣೆ ಮಾಡುತ್ತಿದ್ದಾಗ ಧೂಳಖೇಡ ಚೆಕ್ ಪೋಸ್ಟ್ ನಲ್ಲಿ ದಾಖಲೆ ರಹಿತವಾದ 4 ಲಕ್ಷ 50 ಸಾವಿರ ರೂಪಾಯಿಗಳು ಜಪ್ತಿ ಮಾಡಲಾಗಿದೆ.

ಮಹಾರಾಷ್ಟ್ರರಾಜ್ಯದ ಔರಂಗಾಬಾದ ಜಿಲ್ಲೆಯ ರೋಶನ ಗಜಾನನ ಕರನಾಶೆ ಯಾವುದೆ ಅಧಿಕೃತ ದಾಖಲೆ ಇಲ್ಲದೆ ಎಮ್ ಹೆಚ್ 20 ಎಫ್ ಯು 2039 ಕಾರ್‌ನಲ್ಲಿ 4 ಲಕ್ಷ 50 ಸಾವಿರ ರೂಪಾಯಿ ನಗದು ಧೂಳಖೇಡ ಮಾರ್ಗದಿಂದ ಬೆಂಗಳೂರ ಕಡೆ ಹೊರಟಿದ್ದರು. ಧೂಳಖೇಡ ಚೆಕ್ ಪೋಸ್ಟ್ ನಲ್ಲಿ ಪೊಲೀಸರು ತಪಾಸಣೆ ವೇಳೆ ಈ ಹಣ ಜಪ್ತಿಮಾಡಿ ಜಿಲ್ಲಾ ಸೀಜರ್ ಕಮೀಟಿಯವರಿಗೆ ಒಪ್ಪಸಲಾಗಿದೆ ಎಂದು ತಿಳಿದು ಬಂದಿದೆ.

ಈ ವೇಳೆ ಎಸ್ ಎಸ್ ಟಿ ಟಿಮ್ ನಂ 13 ರ ಅಧಿಕಾರಿಗಳಾದ ಪರಮೇಶ್ವರ ತಳವಾರ, ಎಸ್ ಜೆ ಪೂಜಾರಿ, ಎನ್ ಎಸ್ ಸಾತಲಗಾಂವ, ಪಿಎಸ್‌ಐ ಹೊನ್ನಪ್ಪ ತಳವಾರ ಇದ್ದರು.
ಈ ಪ್ರಕರಣ ಕುರಿತು ಝಳಕಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Most Popular

To Top
error: Content is protected !!