Gummata Nagari

Headlines

ಸ್ವಂತ ಹಣದಲ್ಲಿ ಬೋರ್‌ವೆಲ್ ಕೊರಸಿ ನದಿಗೆ ನೀರು ಬಿಟ್ಟ ರೈತ

ಹಾವೇರಿ: ಈ ಬಾರಿ ರಾಜ್ಯದಲ್ಲಿ ಆವರಿಸಿರುವ ಭೀಕರ ಬರಗಾಲಕ್ಕೆ ರಾಜ್ಯದಲ್ಲಿ ಜಲಕ್ಷಾಮ ಎದುರಾಗಿದೆ. ಇದಕ್ಕೆ ಹಾವೇರಿ ಜಿಲ್ಲೆ ಏನು ಹೊರತಾಗಿಲ್ಲ. ಇಲ್ಲಿ ಹರಿಯುವ ತುಂಗಭದ್ರಾ, ವರದಾ, ಧರ್ಮಾ, ಕುಮಧ್ವತಿ ನಾಲ್ಕು ನದಿಗಳ ಒಡಲು ಖಾಲಿ ಖಾಲಿ ಆಗಿವೆ. ಜನರು ನೀರಿಗಾಗಿ ಹಪಹಪಿಸುತ್ತಿದ್ದಾರೆ. ಇದನ್ನು ಅರಿತ ಜಿಲ್ಲೆಯ ಹಾವೇರಿ ತಾಲೂಕಿನ ಸಂಗೂರು ಗ್ರಾಮದ ರೈತ ಭುವನೇಶ್ವರ ಶಿಡ್ಲಾಪು ವರದಾ ನದಿಗೆ ತನ್ನ ಸ್ವಂತ ದುಡ್ಡಿನಲ್ಲಿ ಬೋರ್ ವೇಲ್ ಕೊರಸಿ ನದಿಗೆ ನೀರು ಬಿಟ್ಟಿದ್ದಾನೆ. ಕಳೆದ ಹದಿನೈದು ದಿನದಿಂದ ನಿತ್ಯ ನೀರು ಬಿಡುತ್ತಿರುವುದರಿಂದ ಗ್ರಾಮದ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ತಕ್ಕ ಮಟ್ಟಿಗೆ ಕಡಿಮೆಯಾಗಿದೆ ಅಂತ್ತಿದ್ದಾರೆ ಸಂಗೂರು ಗ್ರಾಮದ ರೈತರು.

 

ಸಂಗೂರು ಗ್ರಾಮದ ರೈತ ಮುಖಂಡ ಭುವನೇಶ್ವರ ಶಿಡ್ಲಾಪುರ ವರದಾ ನದಿಯ ಪಕ್ಕದಲ್ಲೇ ಇರುವ ತನ್ನ 20 ಎಕರೆ ಜಮೀನಿಗೆ ಎರಡು ಪಂಪ್ ಸೇಟ್ ಮೂಲಕ ನೀರು ಅವಲಂಬಿಸಿದ್ದ ಪಂಪ್ ಸೇಟ್ ನಂಬಿ ಅಡಿಕೆ, ತೆಂಗು, ಭತ್ತ, ಗೋವಿನ ಜೋಳ ಸೇರಿದಂತೆ ವಿವಿಧ ಬೆಳೆ ಬೆಳೆದಿದ್ದ. ವರದಾ ನದಿ ನೀರು ಬತ್ತಿದ ಹಿನ್ನಲೆ ಬೆಳೆ ಒಣಗಲಾರಂಭಿಸಿದ್ದು ಹೀಗಾಗಿ ಎರಡು ಲಕ್ಷ ರೂ. ಹಣ ಖರ್ಚು ಮಾಡಿ ಹದಿನೈದು ದಿನದ ಹಿಂದೆ ಬೋರ್ ವೇಲ್ ಕೊರೆಸಿದ್ದರು.

ದೇವರ ದಯದಿಂದ ಐದು ಇಂಚು ನೀರು ಬಿದ್ದಿತ್ತು, ಆದರೆ ಗ್ರಾಮದಲ್ಲಿ ಎದುರಾಗಿರುವ ನೀರಿನ ಬವಣೆ ಅರೆತುಕೊಂಡ ಭುವನೇಶ್ವರ ತನ್ನ ಬೆಳೆ ಒಣಗಿದರು ಪರವಾಗಿಲ್ಲಾ ಎಂದು ಯಾವುದೇ ಫಲಾಪೇಕ್ಷ ಬಯಸದೆ ರೈತರ ಜಾನುವಾರುಗಳಿಗೆ ಮತ್ತು ವನ್ಯಜೀವಿಗಳಿಗೆ ಅನುಕೂಲವಾಗಲಿ ಎಂದು ಬೋರ್ ನೀರು ಎತ್ತಿದ್ದಾಗಿನಿಂದಲು ವರದಾ ನದಿಗೆ ನೀರು ಬಿಟ್ಟಿದ್ದಾರೆ.

ಈ ರೈತನ ಕಾರ್ಯಕ್ಕೆ ಸಂಗೂರು ಗ್ರಾಮದ ಜನರು ಮೆಚ್ಚಿಗೆ ವ್ಯಕ್ತಪಡಿಸುತ್ತಿದ್ದಾರೆ. ಬರಗಾಲದಲ್ಲಿ ನೀರಿನ ಬವಣೆ ಹೆಚ್ಚಾಗಿದೆ. ಇದನ್ನು ಅರಿತುಕೊಂಡು ಉಳಿದ ರೈತರು ತಮಗಾದ ಅಳಿಲು ಸೇವೆ ಮಾಡಲಿ ಎನ್ನುವುದು ಭುವನೇಶ್ವರ ಮನದಾಳದ ಮಾತು.

Most Popular

To Top
error: Content is protected !!