Gummata Nagari

Bijapur

ಕೊಲ್ಹಾರ: ಕೆರೆಯ ಸಮೀಪ ಕಾಣಿಸಿಕೊಂಡ ಬೆಂಕಿ

ಕೊಲ್ಹಾರ: ರಾಷ್ಟ್ರೀಯ ಹೆದ್ದಾರಿ 218 ರ ಗರಸಂಗಿ ಕೆರೆಯ ಸಮೀಪ ಇಂದು ಮಧ್ಯಾಹ್ನ ಏಕಾಏಕಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಸಿತು.

ಬೆಂಕಿಯ ಕೆನ್ನಾಲಿಗೆ ಹಬ್ಬುತ್ತಿದ್ದಂತೆ ಅಕ್ಕ ಪಕ್ಕದ ಜಮೀನುಗಳ ರೈತರು ಪಂಪ್ ಸೆಟ್ ನೀರಿನಿಂದ ಬೆಂಕಿ ನಂದಿಸಲು ಯತ್ನಿಸಿದರು. ಆದರೂ ಬೆಂಕಿ ಹತೋಟಿಗೆ ಬರದ ಕಾರಣ, ಅಖಂಡ ಕರ್ನಾಟಕ ರೈತ ಸಂಘದ ತಾಲೂಕ ಅಧ್ಯಕ್ಷ ರಮೇಶ ಬಾಲಗೊಂಡ ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿಗೆ ಕರೆ ಮಾಡಿ ವಿಷಯ ಮುಟ್ಟಿಸಿದರು.

ಸುದ್ದಿ ತಿಳಿದು ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು.

Most Popular

To Top
error: Content is protected !!