Gummata Nagari

Bijapur

ಮತದಾನ ಅರಿವಿನಿಂದ ಬಲಿಷ್ಠ ದೇಶ ಕಟ್ಟಲು ಸಾಧ್ಯ

 

ಸಿಂದಗಿ: ಪಟ್ಟಣದ ಪದ್ಮರಾಜ ಶಿಕ್ಷಣ ಮಹಾವಿದ್ಯಾಲಯ ಸಿಂದಗಿ ಅವರ ನೇತೃತ್ವದಲ್ಲಿ ಬಿಎಡ್ ಪ್ರಶಿಕ್ಷಣಾರ್ಥಿಗಳಿಂದ ಮತದಾನ ಜಾಗೃತಿ ಅಭಿಯಾನ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಪಟ್ಟಣದ ಸಾರಂಗಮಠದಲ್ಲಿ ಅಭಿಯಾನಕ್ಕೆ ಚಾಲನೆ ನೀಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಆರೀಫ್ ಬಿರಾದಾರ ಮಾತನಾಡಿ, ಜನರಿಗೆ ಮತದಾನದ ಜಾಗೃತಿ ಅವಶ್ಯಕವಾಗಿದ್ದು, ಮತದಾನದ ಬಗ್ಗೆ ಅರಿವು ಮೂಡಿಸಿದಾಗ ಬಲಿಷ್ಠ ದೇಶ ಕಟ್ಟಲು ಸಾಧ್ಯ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಮಾಡುವ ಮೂಲಕವೇ ಸರ್ಕಾರ ರಚಿಸುವ ಅವಕಾಶಗಳಿರುವುದರಿಂದ, , ಜನರಲ್ಲಿ ಸಾಮಾಜಿಕ ಪ್ರಜ್ಞೆ ಮೂಡಿಸುವುದು ಅಗತ್ಯ, ಎಂದರು.

ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಆರೀಫ್ ಬಿರಾದಾರ ಹಾಗೂ ಪದ್ಮರಾಜ್ ಶಿಕ್ಷಣ ಮಹಾವಿದ್ಯಾಲಯದ ಬಿಎಡ್ ಪ್ರಾಂಶುಪಾಲ ಜೆ ಸಿ ನಂದಿಕೋಲ್, ಪಿ ಸಿ ಕುಲಕರ್ಣಿ, ಚನ್ನು ಕತ್ತಿ, ರೇವಣಸಿದ್ದಪ್ಪ ಹಾಲಕೇರೆ, ವಿದ್ಯಾ ಮೊಘಲೆ ಸಂಸ್ಥೆಯ ಸಿಬ್ಬಂದಿ ವರ್ಗ ಹಾಗೂ ಬಿಎಡ್ ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.

Most Popular

To Top
error: Content is protected !!