Gummata Nagari

Headlines

ಡ್ಯಾನ್ಸ್ ಮಾಡುವಾಗ ಮೈ ಟಚ್ ಆಗಿದ್ದಕ್ಕೆ ಯುವಕನ ಕೊಲೆ

 

ಬೆಂಗಳೂರು: ಇಡೀ ದೇಶಾದ್ಯಂತ ನಿನ್ನೆ ಶಿವರಾತ್ರಿ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಕರ್ನಾಟಕದಲ್ಲಿಯೂ ಶಿವರಾತ್ರಿ ಆಚರಿಸಲಾಗಿದೆ. ಆದರೆ, ಬೆಂಗಳೂರಿನಲ್ಲಿ ಡ್ಯಾನ್ಸ್ ಮಾಡುವ ವೇಳೆ ದೇಹ ತಾಗಿತು ಎಂಬ ಸಣ್ಣ ಕಾರಣಕ್ಕೆ ಯುವಕನೊಬ್ಬನನ್ನು ಕೊಲೆ ಮಾಡಲಾಗಿದೆ. ಗಿರಿನಗರದ ದೇವಸ್ಥಾನದ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದೆ. ಯೋಗೇಶ್ (23) ಕೊಲೆಯಾದ ಯುವಕನಾಗಿದ್ದಾನೆ.

ಬೈಕ್ ಸರ್ವೀಸ್ ಸೆಂಟರ್‌ನಲ್ಲಿ ಯೋಗೇಶ್ ವಾಷಿಂಗ್ ಕೆಲಸ ಮಾಡುತ್ತಿದ್ದ. ನಿನ್ನೆ ಗಿರಿನಗರದ ದೇವಸ್ಥಾನದ ಕಾರ್ಯಕ್ರಮದಲ್ಲಿ ಡ್ಯಾನ್ಸ್ ಮಾಡುವಾಗ ದೇಹ ತಾಗಿತೆಂಬ ವಿಚಾರವಾಗಿ ಗಲಾಟೆ ನಡೆದಿದೆ. ಬಳಿಕ ಡ್ಯಾನ್ಸ್ ಮುಗಿಸಿ ಶ್ರೀನಗರದ ತನ್ನ ಮನೆಗೆ ಬೈಕ್ ಮೂಲಕ ಯೋಗೇಶ್ ಹೋಗುವಾಗ ನಾಲ್ವರು ಯುವಕರು ಹಿಂಬಾಲಿಸಿದ್ದಾರೆ.

ಬಳಿಕ ದಾಳಿ ನಡೆಸಿದ ನಾಲ್ವರು, ಚಾಕುವಿನಿಂದ ಯೋಗೀಶ್‌ಗೆ ಚುಚ್ಚಿದ್ದಾರೆ. ಹಂತಕರಿAದ ತಪ್ಪಿಸಿಕೊಳ್ಳುವ ಭರದಲ್ಲಿ ಯೋಗೇಶ್ ಮನೆಯೊಂದರ ಕಾಂಪೌAಡ್ ಹಾರಿದ್ದ. ಅಗ ಕಾಂಪೌoಡ್‌ಗೆ ಹಾಕಿದ್ದ ಗ್ಲಾಸ್ ಚುಚ್ಚಿರಬಹುದು ಎಂದು ಕೆಲವರು ಭಾವಿಸಿದ್ದರು. ಆದರೆ ಪೊಲೀಸರು ತನಿಖೆ ಮಾಡಿದಾಗ ಹತ್ಯೆ ಮಾಡಿರುವುದು ಬೆಳಕಿಗೆ ಬಂದಿದೆ.

ಪ್ರಕರಣ ದಾಖಲಿಸಿಕೊಂಡ ಬ್ಯಾಟರಾಯನಪುರ ಠಾಣಾ ಪೊಲೀಸರು, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಸದ್ಯ ಬಂಧಿತರನ್ನು ತನಿಖೆ ನಡೆಸಲಾಗುತ್ತಿದ್ದು, ಹಳೆ ದ್ವೇಷ ಏನು ಕೂಡ ಕಂಡು ಬಂದಿಲ್ಲ ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ.

Most Popular

To Top
error: Content is protected !!