Gummata Nagari

Bijapur

ಶೀಘ್ರದಲ್ಲೇ ಮತ್ತೊಂದು ಸಿಡಿ ಫ್ಯಾಕ್ಟರಿ ಓಪನ್ : ಯತ್ನಾಳ

 

ಬಿಜಾಪುರ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಚರ್ಚೆ ದೇಶದಾದ್ಯಂತ ನಡೆಯುತ್ತಿರುವ ಬೆನ್ನಲ್ಲೇ ಬಿಜಾಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೊಂದು ಬಾಂಬ್ ಸಿಡಿಸಿದ್ದಾರೆ.
ಶೀಘ್ರದಲ್ಲೇ ಮತ್ತೊಂದು ಸಿಡಿ ಫ್ಯಾಕ್ಟರಿ ಓಪನ್ ಆಗಲಿದೆ ಎಂದು ಅವರು ಹೇಳಿದ್ದಾರೆ. ಇದು ಯಾರಿಗೆ ಸಂಬoಧಿಸಿದ್ದು, ಯಾರು ಮಾಡುತ್ತಿದ್ದಾರೆ ಇತ್ಯಾದಿ ಯಾವ ವಿವರವನ್ನೂ ಅವರು ಬಹಿರಂಗಪಡಿಸಿಲ್ಲ.

ಲೋಕಸಭೆ ಚುನಾವಣೆಯ ಮೂರನೇ ಹಂತದ ಮತದಾನದ ವೇಳೆ ಮತ ಚಲಾಯಿಸಿ ಬಳಿಕ ಮಾತನಾಡಿದ ಅವರು, ಪ್ರಜ್ವಲ್ ಅಶ್ಲೀಲ ವಿಡಿಯೋ ಬಹಿರಂಗವಾಗಿದ್ದರ ಹಿಂದೆ ಡಿಸಿಎಂ ಡಿಕೆ ಶಿವಕುಮಾರ್ ಕೈವಾಡವಿದೆ ಎಂದು ಆರೋಪಿಸಿದರು. ಸೋಮವಾರ ವಕೀಲ, ಬಿಜೆಪಿ ನಾಯಕ ದೇವೇರಾಜೇ ಗೌಡರು ಆರೋಪಿಸಿದಂತೆ ಪ್ರಕರಣದಲ್ಲಿ ಡಿಕೆಶಿ ಕೈವಾಡ ಇರುವುದು ಸ್ಪಷ್ಟ ಎಂದು ಹೇಳಿದರು.

ರಾಜ್ಯ ಸರ್ಕಾರ ರಚನೆ ಮಾಡಿರುವ ಎಸ್‌ಐಟಿ ಸಂಪೂರ್ಣವಾಗಿ ಡಿಕೆ ಶಿವಕುಮಾರ್ ವಶದಲ್ಲಿದೆ. ಅವರ ಆಣತಿಯಂತೆ ಕೆಲಸ ಮಾಡುತ್ತದೆ ಎಂದು ಯತ್ನಾಳ್ ದೂರಿದರು.

ಪ್ರಜ್ವಲ್ ಪ್ರಕರಣ ಉತ್ತರ ಕರ್ನಾಟಕ ಭಾಗದ ಚುನಾವಣೆಯಲ್ಲಿ ಬಿಜೆಪಿ ಮೇಲೆ ಪರಿಣಾಮ ಬೀರಲ್ಲ ಎಂದು ಯತ್ನಾಳ್ ಅಭಿಪ್ರಾಯಪಟ್ಟಿದ್ದಾರೆ. ಉತ್ತರ ಕರ್ನಾಟಕ ಭಾಗದಲ್ಲಿ 2019ರ ಚುನಾವಣೆಯಲ್ಲಿಯೂ ನಾವು ಉತ್ತಮ ಸಾಧನೆ ಮಾಡಿದ್ದೆವು. ಈ ಭಾಗದಲ್ಲಿ ಜೆಡಿಎಸ್ ಅಷ್ಟು ಪ್ರಬಲವಾಗಿಲ್ಲ. ಈ ಎಲ್ಲ ಕಾರಣಗಳಿಂದ ಪ್ರಜ್ವಲ್ ಪ್ರಕರಣದಿಂದ ಈ ಭಾಗದಲ್ಲಿ ಬಿಜೆಪಿಗೆ ಹಿನ್ನಡೆಯಾಗಲ್ಲ ಎಂದು ಯತ್ನಾಳ್ ಹೇಳಿದ್ದಾರೆ.

Most Popular

To Top
error: Content is protected !!