Gummata Nagari

Headlines

ಇಂಜಿನಿಯರ್ ಗಂಡನಿಗೆ ಬೆಟ್ಟಿಂಗ್ ಭೂತ: ಪತ್ನಿ ನೇಣಿಗೆ ಶರಣು

 

ಚಿತ್ರದುರ್ಗ: ಖುದ್ದು ಇಂಜಿನಿಯರ್ ಆಗಲು ಬಯಸಿದ್ದವಳು ಪೋಷಕರ ಆಸೆಯಂತೆ ಇಂಜಿನಿಯರ್ ವರನನ್ನೇ ಕೈಹಿಡಿದಿದ್ದಳು. ಆದ್ರೆ, ಮದುವೆಯಾಗಿ ಮೂರೇ ವರ್ಷಕ್ಕೆ ಪತಿರಾಯ ಐಪಿಎಲ್ ಬೆಟ್ಟಿಂಗ್‌ಗೆ ಬಲಿ ಆಗಿದ್ದು ಬಯಲಾಗಿದೆ. ಅಲ್ಲದೆ ಸಾಲಗಾರರ ಕಿರುಕುಳದಿಂದ ನೊಂದ ಅವಳು ಕೊನೆಗೆ ನೇಣಿಗೆ ಶರಣಾದ ದಾರುಣ ಘಟನೆ ಕೋಟೆನಾಡಿನಲ್ಲಿ ನಡೆದಿದೆ.

ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ನಗರದ ಬಸವ ಲೇಔಟ್ ನ ನಿವಾಸಿ ದರ್ಶನ್ ಹೊಸದುರ್ಗದಲ್ಲಿ ಸಣ್ಣ ನೀರಾವರಿ ಇಲಾಖೆಯ ಎಇ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಹೀಗಾಗಿ, ಇಂಜಿನಿಯರಿAಗ್ ಮೊದಲ ವರ್ಷದಲ್ಲಿದ್ದ ರಂಜಿತಾಳನ್ನು ಪೋಷಕರು ಈ ದರ್ಶನ್‌ಗೆ ಕೊಟ್ಟು ಮದುವೆ ಮಾಡಿದ್ದರು.

ಮದುವೆಯಾಗಿ ಎರಡು ವರ್ಷ ಉತ್ತಮ ಸಂಸಾರವೇ ನಡೆದಿತ್ತು ಪುಟ್ಟ ಮಗುವೂ ಜತೆಯಾಗಿತ್ತು. ಅಷ್ಟರಲ್ಲೇ ದರ್ಶನ್ ಐಪಿಎಲ್ ಬೆಟ್ಟಿಂಗ್‌ನಲ್ಲಿ ತೊಡಗಿದ್ದು ಲಕ್ಷಾಂತರ ರೂಪಾಯಿ ಸಾಲ ಮಾಡಿದ್ದು ಬಯಲಾಗಿತ್ತು. ಬೆಟ್ಟಿಂಗ್ ದಂಧೆಕೋರರೇ ಸಾಲ ನೀಡಿ ಖಾಲಿ ಚೆಕ್ ಪಡೆದಿದ್ದು ಸಹ ಕುಟುಂಬಸ್ಥರಿಗೆ ತಿಳಿದಿತ್ತು.
ಕುಟುಂಬದ ಹಿರಿಯರು ಸೇರಿ ನ್ಯಾಯ ಪಂಚಾಯತಿ ನಡೆಸಿ ಹಣ ಹಿಂದಿರಿಗಿಸುವುದಾಗಿ ಹೇಳಿ ಸಮಯ ಪಡೆದಿದ್ದಾರೆ. ಆದ್ರೂ. ದಂಧೆಕೋರರು ಮಾತ್ರ ಬೆನ್ನು ಬಿಡದ ಭೂತದಂತೆ ಬೆನ್ನು ಬಿದ್ದಿದ್ದಾರೆ. ಮನೆ ಬಳಿಗೆ ಬಂದು ಗಲಾಟೆ ಶುರು ಮಾಡಿದ್ದಾರೆ. ಅಲ್ಲದೆ ಫೋನ್ ಮಾಡಿ ಹಣ ವಾಪಸ್ ಕೊಡುವಂತೆ ಪೀಡಿಸುತ್ತಿದ್ದರು. ಹೀಗಾಗಿ, ನೊಂದ ರಂಜಿತಾ ತನ್ನ ಕೊಠಡಿಯೊಳಗೆ ನೇಣಿಗೆ ಶರಣಾಗಿದ್ದಾಳೆ. ಹೀಗಾಗಿ, ರಂಜಿತಾಳ ತಂದೆ ವೆಂಕಟೇಶ್ ಈ ಬಗ್ಗೆ ಹೊಳಲ್ಕೆರೆ ಠಾಣೆಗೆ ದೂರು ನೀಡಿದ್ದಾರೆ.

ಹೊಳಲ್ಕೆರೆಯ ಶಿವು, ಗಿರೀಶ್, ರಾಘು, ಚಿತ್ರದುರ್ಗದ ಸುದೀಪ್, ತಿಪ್ಪೇಸ್ವಾಮಿ, ವೆಂಕಟೇಶ್, ಗುರು, ವಾಗೀಶ್, ರಾಕೇಶ್, ಪಾವಗಡದ ಪೋತರೆಡ್ಡಿ, ಅಜ್ಜಂಪುರದ ಹೊನ್ನಪ್ಪ, ಹಿರಿಯೂರಿನ ಮಹಾಂತೇಶ್, ಜಗನ್ನಾಥ ಸೇರಿ ಹಲವರು ಕಿರುಕುಳ ನೀಡಿದ್ದಾರೆಂದು ಆರೋಪಿಸಿದ್ದಾರೆ.

ಆದ್ರೆ, ಮೃತಳ ಸಂಬAಧಿಕರು ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ. ಹೊಳಲ್ಕೆರೆ ಮಾತ್ರವಲ್ಲದೆ ಇಡೀ ಚಿತ್ರದುರ್ಗದಲ್ಲಿ ಈ ಪ್ರಕರಣದಿಂದಾಗಿ ಭೀತಿ ಸೃಷ್ಠಿ ಆಗಿದೆ. ಹೀಗಾಗಿ, ಅನೇಕರ ಬಲಿ ಪಡೆಯುತ್ತಿರುವ ಕ್ರಿಕೆಟ್ ಬೆಟ್ಟಿಂಗ್ ದಂಧೆ ತಡೆಯಬೇಕು. ಕಿಂಗ್ ಪಿನ್ ಗಳಿಗೆ ಮೊದಲು ಹೆಡೆಮುರಿ ಕಟ್ಟಬೇಕೆಂಬುದು ಇವ್ರ ಆಗ್ರಹ.

ಇನ್ನು ಈ ಬಗ್ಗೆ ಹೊಳಲ್ಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಂತೆಯೇ ಪೊಲೀಸ್ರು ಪ್ರಕರಣದ ಬಗ್ಗೆ ಈಗಾಗಲೇ ಡಿವೈಎಸ್ಪಿ ದಿನಕರ್, ಪಿಎಸ್ ಐ ಸುರೇಶ್ ನೇತೃತ್ವದಲ್ಲಿ ತನಿಖೆ ಆರಂಭಿಸಿದ್ದಾರೆ. 12 ಜನರ ಬಳಿ ಖಾಲಿ ಚೆಕ್ ನೀಡಿ ಸುಮಾರು 54 ಲಕ್ಷ ರೂಪಾಯಿ ಸಾಲ ಮಾಡಿಕೊಂಡಿದ್ದಾರೆ.
2021ರಿAದ 23 ರವರೆಗೆ ಸಾಲ ಮಾಡಿದ್ದಾಗಿ ತಿಳಿದು ಬಂದಿದೆ. ಸಾಲದ ಹಣಕ್ಕಾಗಿ ಮನೆ ಬಳಿ ತೆರಳಿ ಗಲಾಟೆ ಮಾಡಿದ್ದ ಆರೋಪಿಗಳಾದ ಶಿವು ಮತ್ತು ಗಿರೀಶ್ ಅವ್ರನ್ನು ಬಂಧಿಸಿದ್ದೇವೆ. ಮೀಟರ್ ಬಡ್ಡಿ ದಂಧೆ ಎಂಬುದು ಸಹ ತನಿಖೆ ವೇಳೆ ತಿಳಿದು ಬರುತ್ತಿದೆ. ಮುಂದಿನ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎನ್ನುತ್ತಿದ್ದಾರೆ ಪೊಲೀಸರು.

 

ಒಟ್ಟಾರೆಯಾಗಿ ಕೋಟೆನಾಡು ಚಿತ್ರದುರ್ಗದಲ್ಲಿ ಐಪಿಎಲ್ ಬೆಟ್ಟಿಂಗ್ ದಂಧೆ ಮತ್ತು ಸಾಲಬಾಧೆಗೆ ಗೃಹಿಣಿ ಬಲಿ ಆಗಿದ್ದಾಳೆ. ಹೊಳಲ್ಕೆರೆ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ. ಪೊಲೀಸ್ ಇಲಾಖೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕಿದೆ. ಕ್ರಿಕೆಟ್ ಬೆಟ್ಟಿಂಗ್ ದಂಧೆ ಮತ್ತು ಮೀಟರ್ ಬಡ್ಡಿ ದಂಧೆಕೋರರಿಗೆ ಹೆಡೆಮುರಿ ಕಟ್ಟಿ ಅಮಾಯಕರ ಪ್ರಾಣ ಉಳಿಸಬೇಕಿದೆ.

Most Popular

To Top
error: Content is protected !!