Gummata Nagari

Bijapur

ಮತದಾನ ಮಾಡಿದರೆ ಮಾತ್ರ ಪ್ರಜಾಪ್ರಭುತ್ವದ ಉಳಿವು

 

ಸಿಂದಗಿ: ತಾಲ್ಲೂಕಿನ ನಾಗಾವಿ ಬಿಕೆ ಗ್ರಾಮದಲ್ಲಿ ಲೋಕಸಭಾ ಚುನಾವಣೆ ನಿಮಿತ್ಯ ಇಂದು ಮತದಾನ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಈ ಕಾರ್ಯಕ್ರಮದಲ್ಲಿ ಸಿಂದಗಿ ತಹಸಿಲ್ದಾರ್ ಪ್ರದೀಪ್ ಕುಮಾರ್ ಹಿರೇಮಠ ಭಾಗವಹಿಸಿ ಮಾತನಾಡಿ, ಈ ಭಾರಿ ಲೋಕಸಭಾ ಚುನಾವಣೆಯಲ್ಲಿ ಆಮಿಷಕ್ಕೆ ಒಳಗಾಗದೆ ಮತದಾರರು ಕಡ್ಡಾಯವಾಗಿ ಮತದಾನ ಮಾಡಬೇಕು ಎಲ್ಲರೂ ಮತದಾನ ಪ್ರಕ್ರಿಯೆ ಪಾಲ್ಗೊಂಡು ನೂರರಷ್ಟು ಮತದಾನ ಮಾಡಿದರೆ ಮಾತ್ರ ಪ್ರಜಾ ಪ್ರಭುತ್ವದ ಪ್ರಾಮುಖ್ಯತೆಗೆ ಅರ್ಥ ಬರುತ್ತದೆ. ಆದ್ದರಿಂದ ಎಲ್ಲ ಅರ್ಹ ಮತದಾರರು ಒತ್ತಡಗಳನ್ನು ಬದಿಗೊತ್ತಿ ಮತದಾನದಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.

ಕ್ರೈಂ ಪಿಎಸ್‌ಐ ಅರವಿಂದ್ ಅಂಗಡಿ ಮಾತನಾಡಿ, ಬರುವ ಮೇ 7 ರಂದು ಲೋಕಸಭೆ ಸಾರ್ವತ್ರಿಕ ಚುನಾವಣೆಗೆ ಮತದಾನ ನಡೆಯಲಿದೆ. ಆದಿನ ಬೆಳಗ್ಗೆ 7 ರಿಂದ ಸಂಜೆ 6 ಗಂಟೆ ವರೆಗೆ ಮತದಾನ ಅವಕಾಶ ಇರಲಿದೆ. ಆ ದಿನ ಅನ್ಯ ಕಾರ್ಯಕ್ರಮವಿದ್ದರು, ಮತದಾನಕ್ಕೆ ಮೊದಲ ಆದ್ಯತೆ ನೀಡಬೇಕು ಎಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಸ್ಥಳಿಯ ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಗೂ ನಾಗಾವಿ ಬಿಕೆ ಗ್ರಾಮಸ್ತರು ಪಾಲ್ಗೊಂಡಿದ್ದರು.
ವರದಿ: ಇಸ್ಮಾಯಿಲ್ ಎಮ್. ಶೇಖ್

Most Popular

To Top
error: Content is protected !!