Gummata Nagari

Bijapur

ಚಕ್‌ಪೋಸ್ಟಗಳಿಗೆ ಜಿಲ್ಲಾಧಿಕಾರಿ ಟಿ.ಬೂಬಾಲನ್ ಭೇಟಿ

 

ಚಡಚಣ: ಲೋಕಸಭಾ ಚುನಾವಣೆ ನಿಮಿತ್ಯ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಜಿಲ್ಲಾಧಿಕಾರಿ ಟಿ.ಬೂಬಾಲನ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಕೆ ಸೋನಾವಾನೆ ಭಾನುವಾರ ಗಡಿಭಾದ ಶಿರಾಡೋಣ, ಧುಳಖೆಡ , ಕೊಂಕಣಗಾAವ ಸೇರಿದಂತೆ ತಾಲೂಕಿನ ವಿವಿಧ ಚಕ್‌ಪೋಸ್ಟಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ನಂತರ ವರದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದೊಳಗೆ ಆಗಮಿಸುವ ಹಾಗೂ ಹೊರ ಹೋಗುವ ಪ್ರತಿಯೊಂದು ವಾಹನವನ್ನು ಕಟ್ಟುನಿಟ್ಟಾಗಿ ತಪಾಸಣೆ ಮಾಡಬೇಕು. ಯಾವುದಾದರು ಅವ್ಯವಹಾರ ಕಂಡು ಬಂದಲ್ಲಿ ತಕ್ಷಣ ಮೇಲಾಧಿಕಾರಿಗಳ ಗಮನಕ್ಕೆ ತಂದು ತಮ್ಮ ಕಾನೂನು ಕ್ರಮ ಕೈಗೊಳ್ಳಬೇಕು. ಪ್ರತಿ ವಾಹನ ತಪಾಸಣೆ ಮಾಡಿದ ವರದಿ ಪುಸ್ತಕದಲ್ಲಿ ಕಡ್ಡಾಯವಾಗಿ ದಾಖಲಿಸಬೇಕು ಎಂದು ಅಧಿಕಾರರಿಗಳಿಗೆ ಸೂಚಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ಸಿಎಸ್ ರಿಶಿಆನಂದ, ಡಿವೈಎಸ್‌ಪಿ, ಎ.ಸಿ ಗದ್ಯಾಳ ಸೇರಿದಂತೆ ತಾಲೂಕಿನ ವಿವಿಧ ಹಂತದ ಅಧಿಕಾರಿಗಳು ಇದ್ದರು.

Most Popular

To Top
error: Content is protected !!