ಶಾಸಕ ಬೆಲ್ಲದ, ಯತ್ನಾಳ ಪ್ರತಿಕೃತಿ ದಹಿಸಿ ಆಕ್ರೋಶ
ಶಾಸಕರ ರೋಲ್ ಕಾಲ್ ಹೇಳಿಕೆಗೆ ಖಂಡನೆ
ಹುಬ್ಬಳ್ಳಿ: ರೋಲ್ ಕಾಲ್ ಹೋರಾಟಗಾರರು ಎಂಬುವಂತ ಶಾಸಕ ಅರವಿಂದ ಬೆಲ್ಲದ ಹಾಗೂ ಬಿಜಾಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿಕೆಯನ್ನು ಖಂಡಿಸಿ ಕನ್ನಡಪರ ಹೋರಾಟಗಾರರು ಹುಬ್ಬಳ್ಳಿ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿಂದು ಅರವಿಂದ ಬೆಲ್ಲದ ಹಾಗೂ ಬಸನಗೌಡ ಪಾಟೀಲ ಯತ್ನಾಳ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿದರು.
ಕನ್ನಡ ನಾಡು ನುಡಿ ಹೋರಾಟಕ್ಕಾಗಿ ಕನ್ನಡ ಪರ ಸಂಘಟನೆಗಳು ಹಾಗೂ ಹೋರಾಟಗಾರರು ಸಾಕಷ್ಟು ಹೋರಾಟಗಳನ್ನು ಮಾಡಿದ್ದಾರೆ. ನಾವೆಲ್ಲರೂ ಅಭಿವೃದ್ಧಿ ಬಯಸಿ ಹೋರಾಟ ಮಾಡಿದ್ದೇವೆ ಆದರೇ ಶಾಸಕ ಅರವಿಂದ ಬೆಲ್ಲದ ಹಾಗೂ ಬಸನಗೌಡ ಪಾಟೀಲ ಯತ್ನಾಳ ಅವರು ಕನ್ನಡ ಪರ ಹೋರಾಟಗಾರರು ರೋಲ್ ಕಾಲ್ ಹೋರಾಟಗಾರರು ಎಂದು ಹೇಳಿಕೆ ನೀಡಿರುವುದು ಖಂಡನೀಯವಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
Gummata Nagari | Leading Kannada News Network in Vijayapura (Bijapur) ಕ್ಷಣ ಕ್ಷಣದ ಸುದ್ದಿ, ಮಾಹಿತಿ ಮನೋರಂಜನೆಗಾಗಿ ನಮ್ಮ Facebook । Twitter । YouTube । Instagram ಅನುಸರಿಸಿ..