ಬಿಜಾಪುರ: ಆರ್ಟಿಓ ಅಧಿಕಾರಿ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ ಘಟನೆ ನಗರದ ಚಾಲುಕ್ಯ ನಗರದ ಪಶ್ಚಿಮ ಬಡಾವಣೆಯಲ್ಲಿ ಬುಧವಾರದಂದು (ಇಂದು) ನಡೆದಿದೆ.
ಬಾಗಲಕೋಟೆ ಜಿಲ್ಲೆ ಜಮಖಂಡಿಯ ಸಾರಿಗೆ ಇಲಾಖೆಯ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಷಣ್ಮುಖಪ್ಪ ತೀರ್ಥ ನಿವಾಸದ ಮೇಲೆ ಲೋಕಾಯುಕ್ತ ಎಸ್ಪಿ ಟಿ. ಮಲ್ಲೇಶ ನೇತೃತ್ವದಲ್ಲಿ ಈ ದಾಳಿ ನಡೆಸಲಾಗಿದೆ.
ಆರ್ಟಿಓ ಅಧಿಕಾರಿ ಷಣ್ಮುಖಪ್ಪ ನಿವಾಸ ಸೇರಿದಂತೆ ಬಿಜಾಪುರ ನಗರದಲ್ಲಿರುವ ಇವರ ಸಂಬAಧಿಕರ ನಿವಾಸಗಳ ಮೇಲೂ ಲೋಕಾಯುಕ್ತರು ದಾಳಿ ನಡೆಸಿ, ದಾಖಲಾತಿಗಳ ಪರಿಶೀಲನೆ ನಡೆಸಿದ್ದಾರೆ.
ಬಿಜಾಪುರದಲ್ಲಿರುವ ಷಣ್ಮುಖಪ್ಪ ತೀರ್ಥ, ಅವರ ಸ್ನೇಹಿತ ವಿಜಯಪುರ ನಗರದ ಶಿಕಾರಖಾನೆ ಪ್ರದೇಶದಲ್ಲಿರುವ ಅಣ್ಣಪ್ಪ ಗುಡ್ಡೋಡಗಿ, ಜಮಖಂಡಿ, ಮಹಾರಾಷ್ಟ್ರದ ಗುಡ್ಡಾಪುರ ಹಾಗೂ ಮೊರಬಗಿ ಸೇರಿದಂತೆ ಒಟ್ಟು ಆರು ಕಡೆಗಳಲ್ಲಿ ಈ ಧಾಳಿ ನಡೆಸಲಾಗಿದೆ. ಅಧಿಕಾರಿಗಳು ಅಕ್ರಮ ಆಸ್ಪಿಪಾಸ್ತಿ ಕುರಿತು ತನಿಖೆ ಮುಂದುವರೆಸಿದ್ದಾರೆ ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ.
ಲೋಕಾಯುಕ್ತ ಅಧಿಕಾರಿಗಳ ಈ ಕಾರ್ಯಾಚರಣೆಯಲ್ಲಿ ಲೋಕಾಯುಕ್ತ ಡಿಎಸ್ಪಿ ಸುರೇಶ ರೆಡ್ಡಿ, ಲೋಕಾಯುಕ್ತ ಇನ್ಸಪೆಕ್ಟರ್ ಆನಂದ ಠಕ್ಕನ್ನವರ ಹಾಗೂ ಇತರ ಸಿಬ್ಬಂದಿ ದಾಳಿಯಲ್ಲಿ ಭಾಗವಹಿಸಿದ್ದರು.