Gummata Nagari

Bijapur

ಮೋದಿ ಮ್ಯಾಜಿಕ್ ಕರ್ನಾಟಕದಲ್ಲಿ ನಡೆಯಲ್ಲ: ರಾಜು ಆಲಗೂರ

 

ತಾಳಿಕೋಟಿ: ಪ್ರಧಾನಿ ಮೋದಿ ಅವರ ವರ್ಚಸ್ಸು ಕರ್ನಾಟಕದಲ್ಲಿ ವರ್ಕೌಟ್ ಆಗುವುದಿಲ್ಲ ಎಂಬುದು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸಾಬೀತಾಗಿದೆ ಇಲ್ಲಿ ಏನಿದ್ದರೂ ಸಿಎಂ ಸಿದ್ದರಾಮಯ್ಯ ನವರ ಹವಾ ನಡೆಯುತ್ತೆ ಎಂದು ಕಾಂಗ್ರೆಸ್ ಪಕ್ಷದ ಜಿಲ್ಲಾ ಅಧ್ಯಕ್ಷ ಹಾಗೂ ಬಿಜಾಪುರ ಲೋಕಸಭಾ ಮೀಸಲು ಮತ ಕ್ಷೇತ್ರದ ಅಭ್ಯರ್ಥಿ ರಾಜು ಆಲಗೂರ ಹೇಳಿದರು.

ಪಟ್ಟಣದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಆಯೋಜಿಸಿದ ಗ್ಯಾರಂಟಿ ಯೋಜನೆ ಫಲಾನುಭವಿಗಳ ಸಮಾವೇಶದಲ್ಲಿ ಭಾಗವಹಿಸಲು ಆಗಮಿಸಿದ ಸಂದರ್ಭದಲ್ಲಿ ಅವರು ಸುದ್ದಿ ಗೋಷ್ಠಿಯಲ್ಲಿ ಮಾತನಾಡಿ, ಪಕ್ಷ ನನ್ನನ್ನು ಅಭ್ಯರ್ಥಿಯನ್ನಾಗಿ ಘೋಷಿಸಿದೆ ಇದಕ್ಕಾಗಿ ಸಹಕರಿಸಿದ ಜಿಲ್ಲೆಯ ನಮ್ಮ ಪಕ್ಷದ ಎಲ್ಲ ಶಾಸಕರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದ ಅವರು ಚುನಾವಣೆಯ ಸಿದ್ಧತೆ ಕುರಿತು ಕೇಳಿದ ಪ್ರಶ್ನೆಗೆ ನಾನು ಚುನಾವಣೆಯನ್ನು ಎದುರಿಸಲು ಎಲ್ಲ ರೀತಿಯಲ್ಲಿಯೂ ಸರ್ವಸನ್ನದ್ಧನಾಗಿದ್ದೇನೆ ರಾಜ್ಯದಲ್ಲಿ ನಮ್ಮ ಪಕ್ಷ ಆಡಳಿತದಲ್ಲಿದೆ ಚುನಾವಣೆ ಸಂದರ್ಭದಲ್ಲಿ ನಾವು ಜನರಿಗೆ ನೀಡಿದ ಐದು ಗ್ಯಾರಂಟಿಗಳ ಆಶ್ವಾಸನೆಗಳನ್ನು ಜಾರಿಗೆ ತಂದಿದ್ದೇವೆ ಜನರ ವಿಶ್ವಾಸ ನಮ್ಮ ಮೇಲಿದೆ ನಮ್ಮ ಸಾಧನೆಗಳೆ ನಮ್ಮ ಚುನಾವಣೆಯ ವಿಷಯಗಳಾಗಲಿವೆ ಎಂದರು.

ಕಾಂಗ್ರೆಸ್ ಪಕ್ಷ ವ್ಯಕ್ತಿ ಆಧಾರಿತದವಾಗಿಲ್ಲ ತತ್ವ ಆಧಾರಿತ ವಾಗಿದೆ. ಮೋದಿಯವರ ನೇತೃತ್ವದ ಬಿಜೆಪಿ ಸರಕಾರವು ಆಡಳಿತದ ಎಲ್ಲಾ ಹಂತದಲ್ಲಿಯೂ ವಿಫಲವಾಗಿದೆ ಇದನ್ನು ಮರೆಮಾಚಲು ಧಾರ್ಮಿಕ ಸೂಕ್ಷ್ಮ ವಿಷಯಗಳನ್ನು ಬಳಸಿಕೊಳ್ಳುತ್ತಿದ್ದಾರೆ ದೇಶದ ಜನರು ಮೂರ್ಖರಲ್ಲ ಈ ಬಾರಿ ಅವರಿಗೆ ತಕ್ಕ ಉತ್ತರ ನೀಡಲಿದ್ದಾರೆ ಎಂದರು.

ಶಾಸಕ ಅಪ್ಪಾಜಿ ನಾಡಗೌಡ ಮಾತನಾಡಿ, ನಮ್ಮ ಪಕ್ಷದ ಅಧ್ಯಕ್ಷರಾದ ರಾಜು ಆಲಗೂರು ಅವರನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಿ ನಮ್ಮ ಪಕ್ಷದ ವರಿಷ್ಠರು ಸೂಕ್ತ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ ಅವರು ಒಳ್ಳೆಯ ಕ್ರಿಯಾಶೀಲ ಯುವ ನಾಯಕರಾಗಿದ್ದು ರಾಜಕಾರಣದ ಅಪಾರ ಅನುಭವವನ್ನು ಹೊಂದಿದವರಾಗಿದ್ದಾರೆ ಅವರ ಗೆಲುವಿಗೆ ಜಿಲ್ಲೆಯ ನಮ್ಮ ಪಕ್ಷದ ಎಲ್ಲಾ ಶಾಸಕರು ಶಕ್ತಿ ಮೀರಿ ಪ್ರಯತ್ನವನ್ನು ಮಾಡುತ್ತೇವೆ ಎಂದರು.

ಈ ಸಮಯದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ಚೋರಗಸ್ತಿ. ಜಿಲ್ಲಾ ಕಾರ್ಯದರ್ಶಿ ಸಿದ್ದನಗೌಡ ಪಾಟೀಲ ನಾವದಗಿ. ಕಾಸಿಂ ಪಟೇಲ ಮೂಕಿಹಾಳ.ಇಲಿಯಾಸ ಬಗಲಿ. ತುಕಾರಾಂ ಗೊಂದಳಿ. ಮೋದಿನಸಾ ನಗಾರ್ಚಿ.ನಬಿ ಗುತ್ತಿಹಾಳ. ಮತ್ತಿತರರು ಇದ್ದರು.

Most Popular

To Top
error: Content is protected !!