ಕೊಪ್ಪಳ: ಇಲ್ಲಿನ ಲೋಕ ಸಭಾ ಕ್ಷೇತ್ರಕ್ಕೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ ನಿರುಪಾದಿ ಕೆ ಗೋಮರ್ಸಿ ಸ್ಪರ್ಧಿಸುವುದು ಖಚಿತವಾಗಿದೆ.
ಕೆ ಆರ್ ಎಸ್ ಪಕ್ಷದ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆ ನೀಡಿದ ಪಕ್ಷದ ರಾಜ್ಯ ಉಪಾಧ್ಯಕ್ಷ ಎಸ್ ಎಚ್ ಲಿಂಗೇಗೌಡ ಮಾತನಾಡಿ, ಕೊಪ್ಪಳ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾನ್ನಾಗಿ ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ ಮತ್ತು ಸಿಂಧನೂರು ವಿಧಾನಸಭಾ ಕ್ಷೇತ್ರದ ಪಕ್ಷದ ಪರಾಜಿತ ಅಭ್ಯರ್ಥಿ ನಿರುಪಾದಿ ಕೆ ಗೋಮರ್ಸಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು.
ಕೊಪ್ಪಳ ಲೋಕಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಹಾಗೂ ಸ್ವಚ್ಚ ,ಪ್ರಾಮಾಣಿಕ, ಜನಪರ ರಾಜಕಾರಣಕ್ಕೆ ನಮ್ಮ ಅಭ್ಯರ್ಥಿಯನ್ನು ಬೆಂಬಲಿಸಬೇಕು. ನಮ್ಮದು ರಾಜ್ಯದ ಏಕೈಕ ಪ್ರಾದೇಶಿಕ ಪ್ರಾಮಾಣಿಕ ರಾಜಕೀಯ ಪಕ್ಷ ಜನರ ಸಮಸ್ಯೆಗಳ ಅರಿವಿರುವ ಸಾಮಾನ್ಯ ಜನರು ರಾಜಕಾರಣಕ್ಕೆ ಬರಬೇಕು ಎನ್ನುವುದು ಪಕ್ಷದ ಉದ್ದೇಶ.ರಾಜ್ಯದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನ ಸಾಮಾನ್ಯರಿಗೆ ವಂಚನೆ ಮಾಡಿ ಜಾತಿ ರಾಜಕಾರಣ, ಹಣ-ಹೆಂಡದ ಮತ್ತು ಕುಟುಂಬ ರಾಜಕಾರಣ ಮಾಡುತ್ತಿವೆ.
ಹಾಗಾಗಿ ಕಳೆದ ನಾಲ್ಕು ವರ್ಷಗಳಿಂದ ಬ್ರಷ್ಟಚಾರದ ವಿರುದ್ದ, ಅನ್ಯಾಯ ಅಕ್ರಮ ಚಟುವಟಿಕೆಗಳ ವಿರುದ್ದ ನಿರಂತರ ಹೋರಾಟ ಮಾಡುತ್ತಿರುವ ಕೆ ಆರ್ ಎಸ್ ಪಕ್ಷ ರಾಜ್ಯದ 28 ಲೋಕಸಭಾ ಕ್ಷೇತ್ರದ ಚುನಾವಣೆ ಸ್ಪರ್ಧೆ ಮಾಡಲಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಪಕ್ಷದ ರಾಜ್ಯ ಸಮಿತಿ ಪದಾಧಿಕಾರಿಗಳಾದ ದೀಪಕ್ ಸಿ,ಎನ್,ಮೂರ್ತಿ ಏನ್,ರಘುಪತಿ ಭಟ್,ಜೀವನ ಎಲ್, ವಿಜಯ್ ಕುಮಾರ್ ಉಪಸ್ಥಿತರಿದ್ದರು.