Gummata Nagari

Headlines

ಹುಬ್ಬಳ್ಳಿಯ ಸಿದ್ಧಾರೂಢ ಮಠದಲ್ಲಿ ಗಲಾಟೆ

 

ಹುಬ್ಬಳ್ಳಿ: ಇಲ್ಲಿನ ಸದ್ಗುರು ಸಿದ್ಧಾರೂಢ ಸ್ವಾಮಿಗಳ ಮಠದಲ್ಲಿ ಮಠದ ಟ್ರಸ್ಟ್ ಕಮಿಟಿ ಮತ್ತು ಭಕ್ತರ ನಡುವೆ ತೀವ್ರ ವಾಗ್ವಾದ ನಡೆದಿದೆ.
ಶಿವರಾತ್ರಿ ಉತ್ಸವ ಆಚರಣೆ ಹಾಗೂ ಲೆಕ್ಕಪತ್ರ ಮಂಡನೆ ವಿಚಾರಕ್ಕೆ ಸಭೆ ಕರೆಯಲಾಗಿತ್ತು. ಈ ವೇಳೆ ಭಕ್ತರು ಖರ್ಚು ವೆಚ್ಚದ ಬಗ್ಗೆ ಮಾಹಿತಿ ಕೇಳಿದ್ದು ಮಠದ ಟ್ರಸ್ಟ್ ಮಾಹಿತಿ ನೀಡಲು ನಿರಾಕರಿಸಿದೆ. ಈ ವೇಳೆ ಭಕ್ತರು ಹಾಗೂ ಟ್ರಸ್ಟ್ ಕಮಿಟಿ ನಡುವೆ ಗಲಾಟೆ, ವಾಗ್ವಾದ ನಡೆದಿದೆ.

ಸಿದ್ಧಾರೂಢ ಸ್ವಾಮಿಗಳ ಮಠದ ಟ್ರಸ್ಟ್ ಕಮಿಟಿ ಕರೆದಿದ್ದ ಸಭೆಯಲ್ಲಿ ಭಾಗಿಯಾದ ಭಕ್ತರು, ಮಠದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕೆಲಸಗಳ ಖರ್ಚುವೆಚ್ಚದ ಬಗ್ಗೆ ಮಾಹಿತಿ ಕೇಳಿದರು. ಕಳಪೆ ಕಾಮಗಾರಿ, ಹಣ ದುರ್ಬಳಕೆ, ಅನವಶ್ಯಕ ಕರ್ಚಿನ ಕುರಿತು ಭಕ್ತರು ಆಕ್ಷೇಪ ಹೊರ ಹಾಕಿದರು. ಆದರೆ ಸಿದ್ಧಾರೂಢ ಮಠದ ಟ್ರಸ್ಟ್ ಕಮಿಟಿ ಭಕ್ತರಿಗೆ ಉತ್ತರ ನೀಡಲು ನಿರಾಕರಿಸಿತು. ಟ್ರಸ್ಟ್ ಕಮಿಟಿ ಅಧ್ಯಕ್ಷರು ಮತ್ತು ಧರ್ಮದರ್ಶಿಗಳ ನಡೆಗೆ ಭಕ್ತರು ಆಕ್ರೋಶ ಹೊರ ಹಾಕಿದ್ದು ಸಭೆಯಲ್ಲಿ ಪರಸ್ಪರ ವಾಗ್ವಾದ, ಗದ್ದಲ ನಡೆಯಿತು.

ಭಕ್ತರ ಒತ್ತಡ ಹೆಚ್ಚುತ್ತಿದ್ದಂತೆ ಟ್ರಸ್ಟ್ ಕಮಿಟಿ ಸಭೆ ರದ್ದು ಪಡಿಸಿತು. ಸಭೆ ಮಾಡಲ್ಲ ಏನ್ಮಾಡ್ತಿರೋ ಮಾಡ್ಕೊಳ್ಳಿ ಎಂದು ಧರ್ಮದರ್ಶಿ ಅವಾಜ್ ಹಾಕಿದ್ದಾರೆ. ಎರಡು ದಿನದಲ್ಲಿ ಸಭೆ ನಡೆಸಿ ಭಕ್ತರ ಪ್ರಶ್ನೆಗೆ ಉತ್ತರ ಕೊಡಬೇಕು. ಕೊಡದಿದ್ದರೆ ಮಠದ ಎದುರು ಸತ್ಯಾಗ್ರಹ ಮಾಡುವುದಾಗಿ ಭಕ್ತರು ಎಚ್ಚರಿಕೆ ನೀಡಿದ್ದಾರೆ.

Most Popular

To Top
error: Content is protected !!