Gummata Nagari

Bijapur

ಹೇಗಿದೆ ನೋಡಿ ರಮೇಶ ಜಿಗಜಿಣಗಿ ಗೆಲುವಿನ ವಿಶ್ವಾಸದ ಮಾತು

 

ಬಿಜಾಪುರ: ನನಗೆ ಈಗ 90 ವರ್ಷ, ನನ್ನ ಮಕ್ಕಳು ನನಗೆ ಚುನಾವಣೆಗೆ ನಿಲ್ಲಬೇಡ ಎಂದು ಹೇಳಿದ್ದಾರೆ. ನಾನು ಟಿಕೆಟ್ ಬಯಸಿರಲಿಲ್ಲ. ಆದರೂ ನನಗೆ ಬಿಜೆಪಿ ಹೈಕಮಾಂಡ ನೀನೆ ಯೋಗ್ಯವಾದ ದಲಿತ ನಾಯಕ ಎಂದು ಟಿಕೆಟ್ ನೀಡಿದರೆ ಬೇಡ ಎನ್ನಲು ಆಗುತ್ತಾ ? ಇದು ನನ್ನ ಕೊನೆಯ ಚುನಾವಣೆ. ಎಲ್ಲ ಪ್ರಚಾರ ಸಭೆಗಳಲ್ಲಿಯೂ ಹೇಳಿದ್ದೇನೆ. ಕನಿಷ್ಠ ಒಂದು ಮತದ ಅಂತರದಿoದಾದರೂ ಗೆಲ್ಲುತ್ತೇನೆ ಎಂದು ಸಂಸದ ರಮೇಶ ಜಿಗಜಿಣಗಿ ತಮ್ಮ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಬಿಜೆಪಿ ಮುಖಂಡರು ನಡೆಸುವ ಸಭೆಗಳಲ್ಲಿ ಭಾಗವಹಿಸುತ್ತಿದ್ದೇನೆ. ನನಗೆ ಟಿಕೆಟ್ ತಪ್ಪಿಸಲು ಹಲವರು ಪ್ರಯತ್ನ ಮಾಡಿದರೂ ಕೊನೆಗೆ ಹೈಕಮಾಂಡ್ ನನಗೆ ಟಿಕೆಟ್ ನೀಡಿದೆ. ಯಾರೇ ವಿರೋಧ ಮಾಡಿದರೂ ಪಕ್ಷದ ಹೈಕಮಾಂಡ್ ನೀನು ಒಳ್ಳೆಯ ದಲಿತ ಮುಖಂಡನಾಗಿದ್ದೀಯಾ. ನೀನೇ ಸ್ಪರ್ಧೆ ಮಾಡು ಎಂದು ಮತ್ತೆ ಟಿಕೆಟ್ ನೀಡಿದೆ ಎಂದು ಅವರು ತಿಳಿಸಿದರು.

ಕಳೆದ ಬಾರಿ 2 ಲಕ್ಷ 60 ಸಾವಿರ ಮತಗಳ ಅಂತರದಿoದ ಗೆದ್ದಿದ್ದೆ, ಆದರೆ ಈ ಬಾರಿ 2 ಲಕ್ಷ 70 ಸಾವಿರ ಮತಗಳ ಅಂತರದಿoದ ಗೆಲ್ಲುವ ವಿಶ್ವಾಸವಿದೆ. ನನಗೆ ಟಿಕೆಟ್ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಸಂಚಾರ ಮಾಡುತ್ತಿದ್ದೇನೆ. ಇದಕ್ಕೆ ಪ್ರತಿಕ್ರಿಯಿಸಿದ ಜನರು ನೀವು ಬರಬೇಡಿ, ನಾವು ಮತ ಹಾಕುತ್ತೇವೆ ಎಂದು ಕಾರ್ಯಕರ್ತರು ಹೇಳುತ್ತಿದ್ದಾರೆ. ಆದರೂ ಕೂಡ ಚುನಾವಣೆಗಾಗಿ ಜಿಲ್ಲೆಯಲ್ಲಿ ಪ್ರಚಾರದಲ್ಲಿ ತೊಡಗಿದ್ದೇನೆ ಎಂದು ತಿಳಿಸಿದರು.

 

ಬಿಜೆಪಿ ಪಕ್ಷದ ಹಿರಿಯ ಮುಖಂಡ ಕೆ.ಎಸ್. ಈಶ್ವರಪ್ಪ ಪುತ್ರನಿಗೆ ಹಾವೇರಿಯಿಂದ ಸ್ಪರ್ಧಿಸಲು ಟಿಕೆಟ್ ನೀಡದ ಹಿನ್ನೆಲೆಯಲ್ಲಿ ಈಶ್ವರಪ್ಪ ಬಂಡಾಯ ಸಾರಿರುವ ಕುರಿತು ಮಾತನಾಡಿದ ಜಿಗಜಿಣಗಿ, ಈಶ್ವರಪ್ಪ ಸಂಘಪರಿವಾರದಿAದ ಬಂದವರು. ಅವರು ಬಾಲ್ಯದಿಂದಲೇ ಸಂಘ ಪರಿವಾರದ ಸಂಸ್ಕೃತಿಯಲ್ಲಿ ಬೆಳೆದಿದ್ದಾರೆ. ನಾನು ಸಂಘ ಪರಿವಾರದಿಂದ ಬಂದವನಲ್ಲ. ರಾಮಕೃಷ್ಣ ಹೆಗಡೆ, ಜೆ. ಎಚ್. ಪಟೇಲ ಅವರ ಗರಡಿಯಲ್ಲಿ ಬೆಳೆದವನು. ನಾನು ಜನತಾ ಪರಿವಾರದಿಂದ ಬಂದಿದ್ದೇನೆ. ನಾನು ಸಂಘ ಪರಿವಾರದ ಬಗ್ಗೆ ಮತ್ತು ಕೆ. ಎಸ್. ಈಶ್ವರಪ್ಪ ಕುರಿತು ಮಾತನಾಡುವಷ್ಟು ದೊಡ್ಡವನಲ್ಲ ಎಂದು ಅವರು ಇದೇ ಸಂದರ್ಭದಲ್ಲಿ ಸ್ಪಷ್ಪಪಡಿಸಿದರು.

ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ ಅವರ ವಿರುದ್ಧ ಮಾಜಿ ಸಚಿವ ಕೆ. ಎಸ್. ಈಶ್ವರಪ್ಪ ಮಾಡಿರುವ ಟೀಕೆಗಳ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಮಾಜಿ ಸಚಿವರೂ ಹಾಗೂ ಹಾಲಿ ಸಂಸದರೂ ಆಗಿರುವ ರಮೇಶ ಜಿಗಜಿಣಗಿ, ನಮಗೆ ಆಗದವರ ಬಗ್ಗೆ ಟೀಕೆ ಮಾಡುವುದು ಸಹಜ ಎಂದು ಮಾರ್ಮಿಕವಾಗಿ ಹೇಳಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ ಮಾಜಿ ಶಾಸಕ ಅರುಣ ಶಹಾಪುರ, ಸೇರಿದಂತೆ ನಾನಾ ಮುಖಂಡರು ಉಪಸ್ಥಿತರಿದ್ದರು.

Most Popular

To Top
error: Content is protected !!