Gummata Nagari

Bijapur

ಲಿಂಗದ ಗುಡಿ ನವೀಕರಣ ಕಾರ್ಯ ಸಂತಸ ತಂದಿದೆ : ಸುನೀಲಗೌಡ ಪಾಟೀಲ

 

ಬಿಜಾಪುರ:  ನಗರದ ಭಕ್ತಿಕೇಂದ್ರವಾದ 770 ಅಮರಗಣಂಗಳರ ಸ್ಮಾರಕ ಲಿಂಗ ದೇವಾಲಯ ನವೀಕರಣ ಮತ್ತು ಮಂದಿರದಲ್ಲಿರುವಎಲ್ಲ ಲಿಂಗಗಳನ್ನು ಪುನರುಜ್ಜೀವನ ಮಾಡುವ ಅವಕಾಶ ನಮ್ಮ ಬಿ.ಎಲ್.ಡಿಇ ಸಂಸ್ಥೆಗೆ ಒದಗಿ ಬಂದಿರುವುದು ಸುದೈವ. ಈ ಮೂಲಕ ಸಂಸ್ಥೆಯನ್ನುಕಟ್ಟಿ ಬೆಳೆಸಿದ ಮಹನೀಯರಿಗೆ ಹಾಗೂ 12ನೇ ಶತಮಾನದ 770 ಶಿವಶರಣರಿಗೆ ನಾವು ಅಳಿಲು ಸೇವೆಯರೂಪದಲ್ಲಿಗೌರವ ಸಲ್ಲಿಸಿದ್ದೇವೆ ಎಂದು ಸಂಸ್ಥೆಯ ನಿರ್ದೇಶಕ ಮತ್ತು ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ಹೇಳಿದ್ದಾರೆ.

ಬಿ.ಎಲ್.ಡಿ.ಇಡೀಮ್ಡ್ ವಿಶ್ವವಿದ್ಯಾಲಯದ ವತಿಯಿಂದರೂ. 1.51 ಕೋಟಿ ವೆಚ್ಚದಲ್ಲಿ ನವೀಕರಿಸಲಾದ 770 ಲಿಂಗಗಳ ದೇವಸ್ಥಾನ ಹಾಗೂ ಪುನರುಜ್ಜೀವನ ಮಾಡಲಾದ ಲಿಂಗಗಳನ್ನು ಇಂದು ಉದ್ಘಾಟಿಸಿ ಅವರು ಮಾತನಾಡಿದರು.

ಬಿ.ಎಲ್.ಡಿ.ಇಡೀಮ್ಡ್ ವಿಶ್ವವಿದ್ಯಾಲಯದಿಂದರೂ. 1.51 ಕೋ. ವೆಚ್ಚದಲ್ಲಿ ನಗರದ 770 ಅಮರಗಳಂಗಳರ ಲಿಂಗದಗುಡಿ ನವೀಕರಣ ಮತ್ತು ಈ ಹಿಂದೆ ಶೆಲ್ಲಿಕೇರಿ ಶಿಲೆಗಳಿಂದ ತಯಾರಿಸಲಾಗಿದ್ದಎಲ್ಲ ಲಿಂಗಗಳನ್ನು ಈಗ ಕೃಷ್ಣ ಶಿಲೆಯಿಂದ ಹೊಸದಾಗಿ ತಯಾರಿಸಿ ಪುನರುಜ್ಜೀವನ ಮಾಡಲಾಗಿದೆ. ಕಳೆದ ವರ್ಷ ಸಂಸ್ಥೆಯಅಧ್ಯಕ್ಷ ಎಂ. ಬಿ. ಪಾಟೀಲ ಅವರುಇಲ್ಲಿಗೆ ಭೇಟಿ ನೀಡಿದಾಗ ಈ ಕಟ್ಟಡ ಹಾಗೂ ಲಿಂಗಗಳು ಶಿಥಿಲಗೊಂಡಿದ್ದರಿoದ ನವೀಕರಣ ಮತ್ತು ಪುನರುಜ್ಜೀವನಕ್ಕೆ ಸೂಚನೆ ನೀಡಿದ್ದರು. ಅವರಆಶಯದಂತೆಎಲ್ಲ ಕಾರ್ಯಗಳನ್ನು ಪೂರ್ಣಗೊಳಿಸಿ ಇಂದು ಶುಕ್ರವಾರ ಮಹಾಶಿವರಾತ್ರಿಯ ಶುಭದಿನದಂದು ಭಕ್ತರಿಗಾಗಿ ಉದ್ಘಾಟಿಸಲಾಗಿದೆ ಎಂದು ತಿಳಿಸಿದರು.

12ನೇ ಶತಮಾನದಲ್ಲಿ ನಾನಾ ಜಾತಿ ಮತ್ತು ಸಮುದಾಯದ 770 ಜನ ಶಿವಶರಣರು ಬಸವೇಶ್ವರರಜೊತೆಗೂಡಿಅನುಭವ ಮಂಟಪದ ಮೂಲಕ ಸಾಮಾಜಿಕಕ್ರಾಂತಿಗೆ ಮುನ್ನುಡಿ ಬರೆದಿದ್ದರು. ಆದರೆಅವರಲ್ಲಿ ಬಸವೇಶ್ವರು, ಅಕ್ಕಮಹಾದೇವಿ ಸೇರಿದಂತೆ ಕೆಲವರ ಹೆಸರುಗಳನ್ನು ಹೊರತು ಪಡಿಸಿದರೆ ಆದಯ್ಯ, ನನ್ನಯ್ಯ, ಸುಜ್ಞಾನಿ ದೇವ, ಕಲಕೇತ ಬೊಮ್ಮಯ್ಯ, ಏಕಾಂತದರಾಮಯ್ಯ ಸೇರಿದಂತೆ 770 ಅಮರಗಣಂಗಳರ ಹೆಸರುಗಳು ಚಿರಪರಿಚಿತವಾಗಿಲ್ಲ. ಈ ಎಲ್ಲ ಶರಣರ ಹೆಸರನ್ನುಚಿರಸ್ಥಾಯಿಯಾಗಿಸಲು 1960ರಲ್ಲಿ ಬಂಥನಾಳ ಶಿವಯೋಗಿಗಳು ಇಲ್ಲಿ 770 ಅಮರಗಣಂಗಳರ ಲಿಂಗ ಪ್ರತಿಷ್ಠಾಪಿಸಿದ್ದರು. ಅಲ್ಲದೇ, ಅಂದು ಪ್ರತಿಯೊಂದು ಲಿಂಗ ಪ್ರತಿಷ್ಠಾಪನೆಯಜವಾಬ್ದಾರಿಯನ್ನುತಲಾಓರ್ವದಂಪತಿಗೆ ನೀಡಿದ್ದರು. ಈ ದೇವಸ್ಥಾನ ಶಿಥಿಲಗೊಂಡ ಹಿನ್ನೆಲೆಯಲ್ಲಿ ಈಗ ಅದನ್ನು ನವೀಕರಣ ಮತ್ತು ಪುನರುಜ್ಜೀವನ ಮಾಡಲಾಗಿದೆಎಂದು ಸುನೀಲಗೌಡ ಪಾಟೀಲ ತಿಳಿಸಿದರು.

ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಮಾತನಾಡಿ, ಬಂಥನಾಶ ಶಿವಯೋಗ ನಿರ್ಮಿಸಿದ್ದ ಈ ದೇವಸ್ಥಾನ ಮತ್ತು ಲಿಂಗಗಳು ಶಿಥಿಲವಾಗಿದ್ದರಿಂದಬಿ.ಎಲ್.ಡಿ.ಇ ಸಂಸ್ಥೆ ರೂ. 1.51 ಕೋಟಿ ವೆಚ್ಚದಲ್ಲಿ ನವೀಕರಣ ಮತ್ತು ಪುನರುಜ್ಜೀವನ ಮಾಡಿರುವುದುಎಲ್ಲ ಭಕ್ತರಿಗೆ ಸಂತಸತAದಿದೆ. ಅಲ್ಲದೇ, ಅಂದು 770 ಶಿಶರಣರ ಲಿಂಗ ಪ್ರತಿಷ್ಠಾಪನೆಗೆ ಭಕ್ತಿಸೇವೆ ಸಲ್ಲಿಸಿದ್ದ ದಂಪತಿಯ ಹೆಸರನ್ನು ಸೇರಿಸಿ ನವೀಕರಿಸಲಾದ ನಾಮಫಲಕವನ್ನೂ ಅಳವಡಿಸುವ ಮೂಲಕ ಶಿವಶರಣರು ನಾಡಿಗೆ ನೀಡಿದಕೊಡುಗೆಯನ್ನು ಸ್ಮರಿಸಲಾಗಿದೆ. ಪ್ರವಾಸೋದ್ಯಮ ಮತ್ತುಆಧ್ಯಾತ್ಮಿಕಕ್ಷೇತ್ರಕ್ಕೆ ಹೆಸರಾಗಿರುವ ವಿಜಯಪುರ ನಗರದ ಭಕ್ತಿಕೇಂದ್ರವಾಗಿರುವ ಈ ದೇವಸ್ಥಾನಇನ್ನು ಮುಂದೆ ಮತ್ತಷ್ಟು ಭಕ್ತರು ಮತ್ತು ಪ್ರವಾಸಿಗರನ್ನು ಆಕರ್ಷಿಸಲಿದೆಎಂದು ಹೇಳಿದರು.

ಈ ಸಂದರ್ಭದಲ್ಲಿ ಬಿ.ಎಲ್.ಡಿ.ಇ ಸಂಸ್ಥೆಯ ನಿರ್ದೇಶಕ ಸಂಗು ಸಜ್ಜನ, ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿ ಡಾ. ಆರ್. ಬಿ. ಕೊಟ್ನಾಳ, ಶರಣಬಸವ ವಾರದ, ಡಾ. ಮಹಾಂತೇಶ ಬಿರಾದಾರ, ಶ್ರೀ ಸಿದ್ದೇಶ್ವರ ಸಂಸ್ಥೆಯ ಚೇರಮನ್ ಬಸಯ್ಯ ಹಿರೇಮಠ, ಎಂ. ಎಂ. ಸಜ್ಜನ, ಸಿದ್ರಾಮಪ್ಪ ಉಪ್ಪಿನ, ನೀಲಾ ಮುಂತಾದವರು ಉಪಸ್ಥಿತರಿದ್ದರು.

ಇದಕ್ಕೂ ಮುಂಚೆ ಶಾಸಕ ಸುನೀಲಗೌಡ ಪಾಟೀಲ ಅವರುತಮ್ಮ ಪತ್ನಿರೇಣುಕಾಅವರಜೊತೆ ಲಿಂಗದಗುಡಿಯಲ್ಲಿ ಮಹಾಶಿವರಾತ್ರಿಯ ಹಿನ್ನೆಲೆಯಲ್ಲಿ ವಿಶೇಷ ಪೂಜೆ ಸಲ್ಲಿಸಿ ಅರ್ಚಕರಿಂದ ಆಶೀರ್ವಾದ ಪಡೆದರು.

Most Popular

To Top
error: Content is protected !!