Gummata Nagari

Bijapur

ಜಾಗೃತಿ ಕರಪತ್ರ ಬಿಡುಗಡೆ ಮಾಡಿದ ಶಾಸಕ ಮನಗೂಳಿ

 

ಸಿಂದಗಿ: ಕಾಂಗ್ರೆಸ್ ಕಾರ್ಯಾಲಯದಲ್ಲಿ 18ನೇ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಡಾ||ಡಿ ಜಿ ಸಾಗರ್ ಬಣ) “ಸಂವಿಧಾನ ಪ್ರಜಾಪ್ರಭುತ್ವ ವಿರೋಧಿ ಕೋಮುವಾದಿ ಪಕ್ಷವನ್ನು ಧಿಕ್ಕರಿಸಿ ಜನ ಪರ ಚಿಂತನೆಯನ್ನು ಹೋಂದಿದ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ” ಎಂದು ಮತದಾರರ ಜಾಗೃತಿ ಕರ ಪತ್ರವನ್ನು ಸಿಂದಗಿ ಶಾಸಕ ಅಶೋಕ ಮನಗೂಳಿ ಬಿಡುಗಡೆಗೊಳಿಸಿದರು.
ಕರ ಪತ್ರ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆಯು ಕಾಂಗ್ರೆಸ್ ಹಾಗೂ ಬಿಜೆಪಿಯ ಮದ್ಯ ನಡೆಯುತ್ತಿರುವ ಚುಣಾವಣೆ ಅಲ್ಲ… ಇದು ಧರ್ಮ.. ಅಧರ್ಮದ ಮದ್ಯ ನಡೆಯುತ್ತಿರುವ ಚುನಾವಣೆ, ಬಿಜೆಪಿ ಪಕ್ಷವು ಅಧರ್ಮವನ್ನು ಸಾರುತ್ತದೆ.. ಕಾಂಗ್ರೆಸ್ ಪಕ್ಷವು ಧರ್ಮವನ್ನು ಜನರಲ್ಲಿ ಬಿತ್ತುತಿದೆ, ಸಂವಿಧಾನ ಪ್ರಜಾಪ್ರಭುತ್ವ ಡಾ. ಬಿ ಆರ್ ಅಂಬೇಡ್ಕರ್ ಅವರ ಚಿಂತನೆಗಳ ಮೇಲೆ ಕಾಂಗ್ರೆಸ್ ಪಕ್ಷವು ನಿಂತಿದೆ.
ಪ್ರಜಾಪ್ರಭುತ್ವದ ಮೌಲ್ಯವನ್ನು ಎತ್ತಿ ಹಿಡಿಯಲು, ಸಂವಿಧಾನದ ಆಶಯ ಜಾರಿ ಮಾಡಲು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ನಮ್ಮ ಪಕ್ಷದ ಅಭ್ಯರ್ಥಿಯಾದ ರಾಜು ಆಲಗೂರ ಅವರಿಗೆ ತಮ್ಮ ಮತ ಚಲಾಯಿಸಿ ಗೆಲ್ಲಿಸಿ ತರಬೇಕೆಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ದ.ಸಂ.ಸ. ಜಿಲ್ಲಾ ಸಂಚಾಲಕ ವೈ ಸಿ ಮಯೂರ್ ಕರ್ನಾಟಕದ ಸಿದ್ದರಾಮಯ್ಯ ಸರಕಾರ ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ಗೌರವ ನೀಡುವ, ದುರ್ಬಲ ವರ್ಗಗಳ ಹಿಂದುಳಿದವರ ಮತ್ತು ಅಲ್ಪಸಂಖ್ಯಾತರ ಹಿತ ಕಾಪಾಡುತ್ತಿದೆ. ಸಂವಿಧಾನ, ಪ್ರಜಾಪ್ರಭುತ್ವ ವಿರೋಧಿ ಕೋಮುವಾದಿ ಪಕ್ಷಗಳನ್ನು ದಿಕ್ಕರಿಸಿ ಜನಪರ ಚಿಂತನೆಯ ಪಕ್ಷ ಕಾಂಗ್ರೆಸ್ ಪಕ್ಷಕ್ಕೆ ತಮ್ಮ ಮತ ಚಲಾವಣೆ ಮಾಡಬೇಕು ಎಂದರು.
ಈ ಸಂದರ್ಭದಲ್ಲಿ ದ.ಸಂ.ಸ ಜಿಲ್ಲಾ ಸಂಚಾಲಕರಾದ ವೈ ಸಿ ಮಯೂರ್, ತಾ. ಸಂಚಾಲಕ ಶರಣು ಚಲವಾದಿ, ಸಂಘಟನಾ ಸಂಚಾಲಕ ನೀಲಕಂಠ ಹೂಸಮನಿ, ಪರಸು ಬ್ಯಾಕೋಡ, ಸಂಘಟನೆಯ ಹಿರಿಯರಾದ ಅಪ್ಪಾರಾಯ ಬಟವಾಲ, ಜೈ ಭೀಮ್ ತಳಕೇರಿ, ಶಿವುಕುಮಾರ ಗಣಿಹಾರ ಸುನೀಲ್ ಸಂಗಟಾಣ, ಸುದೀರ್ ಬಟವಾಲ, ಹಾಗೂ ನೂರಾರು ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಉಪಸ್ಥಿತರಿದ್ದರು.

Most Popular

To Top
error: Content is protected !!