ಬಿಜಾಪುರ: ಇಲ್ಲಿನ ಮೀಸಲು ಲೋಕಸಭಾ ಮತಕ್ಷೇತ್ರದ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಮೈತ್ರಿ ಅಭ್ಯರ್ಥಿ ಸಂಸದ ರಮೇಶ ಜಿಗಜಿಣಗಿ ಮಂಗಳವಾರದoದು ಉಭಯ ಪಕ್ಷಗಳ ಸಹಸ್ರಾಶರು ಕಾರ್ಯಕರ್ತರು ಹಾಗೂ ತಮ್ಮ ಅಪಾರ ಬೆಂಬಲಿಗರೊoದಿಗೆ ಜಿಲ್ಲಾ ಚುನಾವಣಾಧಿಕಾರಿ ಟಿ. ಭೂಬಾಲನ್ ಅವರಿಗೆ ನಾಮಪತ್ರ ಸಲ್ಲಿಸಿದರು.
ನಗರದ ಮೊಧುಲಾ ಮಾರುತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವ ಮೂಲಕ ಭವ್ಯ ಮೆರವಣಿಗೆಗೆ ಚಾಲನೆ ನೀಡಲಾಯಿತು. ಬಳಿಕ ತೆರೆದ ವಾಹನದಲ್ಲಿ ನಡೆದ ಈ ಭವ್ಯ ಮೆರವಣಿಗೆಯು ವಾದ್ಯ ಮೇಳ, ಜೈಕಾರಗಳೊಂದಿಗೆ ಮಹಾತ್ಮ ಗಾಂಧಿ ವೃತ್ತ ತಲುಪಿತು. ಬಳಿಕ ಈ ಮೆರವಣಿಗೆಯು ಬಸವೇಶ್ವರ ವೃತ್ತ, ಡಾ. ಬಿ.ಆರ್. ಅಂಬೇಡ್ಕರ ವೃತ್ತ ತಲುಪಿತು. ಈ ವೇಳೆ ಮೆರವಣಿಗೆಯಲ್ಲಿ ಪಾಲ್ಗೊಂಡ ಬಿಜೆಪಿ – ಜೆಡಿಎಸ್ ಪಕ್ಷದ ಕಾರ್ಯಕರ್ತರು ಸಂಸದ ರಮೇಶ ಜಿಗಜಿಣಗಿ ಪರ ಜೈ ಕಾರ ಹಾಕಿದರು.
ಬಳಿಕ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಪಾದಯಾತ್ರೆಯ ಮೂಲಕ ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು.
ಈ ನಾಮಪತ್ರ ಸಲ್ಲಿಕೆಯ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಮುಖಂಡರಾದ ಡಾ. ಉಮೇಶ ಜಾಧವ್, ಬಿಜೆಪಿ ಪಕ್ಷದ ಜಿಲ್ಲಾಧ್ಯಕ್ಷ ಕೂಚಬಾಳ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
ಈ ಭವ್ಯ ಮೆರವಣಿಗೆಯಲ್ಲಿ ಮಾಜಿ ಸಚಿವರಾದ ಸಿ.ಟಿ. ರವಿ, ಹಾಲಪ್ಪ ಆಚಾರ್, ರಾಜ್ಯ ಸಭಾ ಸದಸ್ಯ ನಾರಾಯಣಸಾ ಭಾಂಡಗೆ, ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ, ಬಿಜೆಪಿ ಜಿಲ್ಲಾ ಅಧ್ಯಕ್ಷ ಆರ್.ಎಸ್. ಪಾಟೀಲ ಕುಚಬಾಳ, ಪ್ರಮುಖರಾದ ಧುರ್ಯೋಧನ ಐಹೊಳಿ, ವಿಜುಗೌಡ ಪಾಟೀಲ, ಸೋಮನಗೌಡ ಪಾಟೀಲ ಸಾಸನೂರ, ಕಾಸುಗೌಡ ಬಿರಾದಾರ, ಅಪ್ಪುಗೌಡ ಪಾಟೀಲ ಮನಗೂಳಿ, ರಮೇಶ ಭೂಸನೂರ, ಬಿ.ಜಿ. ಪಾಟೀಲ ಹಲಸಂಗಿ, ಅರುಣ ಶಹಾಪೂರ, ಶಂಕರಗೌಡ ಪಾಟೀಲ, ಸಂಜಯ ಪಾಟೀಲ ಕನಮಡಿ, ಡಾ.ಗೌತಮ ಚೌಧರಿ ಪಾಲ್ಗೊಂಡಿದ್ದರು.