Gummata Nagari

Bijapur

12 ರಿಂದ ನಾಮಪತ್ರ ಸಲ್ಲಿಕೆ ಆರಂಭ : ಡಿಸಿ ಜಾನಕಿ

 

ಬಾಗಲಕೋಟೆ: ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಎಪ್ರೀಲ್ 12 ರಿಂದ 19 ವರೆಗೆ ರಜಾ ದಿನಗಳನ್ನು ಹೊರತುಪಡಿಸಿ ಬೆಳಿಗ್ಗೆ 11 ರಿಂದ ಮಧ್ಯಾಹ್ನ 3 ಗಂಟೆವರೆಗೆ ನಾಮಪತ್ರ ಸಲ್ಲಿಸಲು ಚುನಾವಣಾ ಆಯೋಗ ಅವಕಾಶ ಕಲ್ಪಿಸಿದೆ ಎಂದು ಜಿಲ್ಲಾಧಿಕಾರಿ ಆಗಿರುವ ಜಿಲ್ಲಾ ಚುನಾವಣಾಧಿಕಾರಿ ಜಾನಕಿ ಕೆಂ.ಎA ಹೇಳಿದರು.

ನಾಮಪತ್ರಗಳನ್ನು ಜಿಲ್ಲಾಡಳಿತ ಭವನದಲ್ಲಿ ಸ್ಥಾಪಿಸಲಾದ ಜಿಲ್ಲಾ ಚುನಾವಣಾಧಿಕಾರಿಗಳ ಕಾರ್ಯಾಲಯದಲ್ಲಿ ಸ್ವೀಕರಿಸಲಾಗುತ್ತದೆ. ನಾಮಪತ್ರ ಸಲ್ಲಿಸುವ ಅಭ್ಯರ್ಥಿಗಳು ಚುನಾವಣಾ ಆಯೋಗ ನೀಡಿರುವ ಎಲ್ಲ ಸೂಚನೆಗಳನ್ನು ಪಾಲಿಸುವ ಮೂಲಕ ಅಗತ್ಯ ದಾಖಲೆಗಳೊಂದಿಗೆ ನಾಮಪತ್ರ ಸಲ್ಲಿಸಬೇಕು. ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ನಾಮಪತ್ರವನ್ನು ನಮೂನೆ-2ಎನಲ್ಲಿ ಸಲ್ಲಿಸಬೇಕು. ನಮೂನೆ-26ರಲ್ಲಿ 100 ರೂ.ಗಳ ಛಾಪಾ ಕಾಗದದಲ್ಲಿ ಅಭ್ಯರ್ಥಿಯ ಘೋಷಣಾ ಪತ್ರ, ಬೇ-ಬಾಕಿಗೆ ಸಂಬAಧಿಸಿದ ಇಲಾಖೆ ಹಾಗೂ ನೋಟರಿ ಪಬ್ಲಿಕ್ ಅವರಿಂದ ದೃಢೀಕರಣ ಪತ್ರ ಸಲ್ಲಿಸಬೇಕು ಎಂದರು.

ಸಾಮಾನ್ಯ ಅಭ್ಯರ್ಥಿಗಳಿಗೆ 25 ಸಾವಿರ ರೂ. ಹಾಗೂ ಪರಿಶಿಷ್ಟ ಜಾತಿ, ಪಂಗಡದ ಅಭ್ಯರ್ಥಿಗಳಿಗೆ 12,500 ರೂ. ಭದ್ರತಾ ಠೇವಣಿ ನಿಗದಿಪಡಿಸಲಾಗಿದೆ. ರಾಷ್ಟಿçಯ, ರಾಜ್ಯ ಮಾನ್ಯತೆ ಪಡೆದ ಪಕ್ಷವಾಗಿದ್ದಲ್ಲಿ ಒಬ್ಬರು, ನೋಂದಾಯಿತ ಮಾನ್ಯತೆ ಪಡೆಯದ ಪಕ್ಷ, ಪಕ್ಷೇತರರು ಹತ್ತು ಸೂಚಕರು ಸಹಿ ಮಾಡಿರಬೇಕು. ರಾಜಕೀಯ ಪಕ್ಷಗಳ ಅಭ್ಯರ್ಥಿಯಾಗಿದ್ದಲ್ಲಿ ಎ ಮತ್ತು ಬಿ ನಮೂನೆಯನ್ನು ನಾಮಪತ್ರ ಸಲ್ಲಿಸುವ ಕೊನೆಯ ದಿನ ಏಪ್ರೀಲ್ 19 ರಂದು ಮದ್ಯಾಹ್ನ 3 ಗಂಟಿ ಒಳಗೆ ಸಲ್ಲಿಸಬೇಕು. ನಾಮಪತ್ರ ಸಲ್ಲಿಸಿದ ನಂತರ ಅಭ್ಯರ್ಥಿಯು ಪ್ರಮಾಣ ವಚನ ಸ್ವೀಕರಿಸಬೇಕು ಎಂದರು.

ಜಿಲ್ಲೆಯಲ್ಲಿ ಎಪ್ರೀಲ್ 9 ವರೆಗೆ ಇದ್ದಂತೆ ಪುರುಷ 893698, ಮಹಿಳಾ 908664 ಹಾಗೂ ತೃತೀಯ ಲಿಂಗ 100 ಸೇರಿ ಒಟ್ಟು 1802462 ಮತದಾರರಿದ್ದಾರೆ. ಲೋಕಸಭಾ ಮತಕ್ಷೇತ್ರಗಳಿಗೆ ಒಳಪಡುವ 1946 ಮತಗಟ್ಟೆಗಳಿಗೆ ಕುಡಿಯುವ ನೀರಿನ ವ್ಯವಸ್ಥೆ, ರ‍್ಯಾಂಪ್ ಸೌಲಭ್ಯ, ವಿದ್ಯುಚ್ಛಕ್ತಿ, ಪೀಠೋಪಕರಣ, ಪುರುಷ ಹಾಗೂ ಮಹಿಳಾ ಶೌಚಾಲಯ ಒದಗಿಸಲಾಗುತ್ತಿದೆ. ಈಗಾಗಲೇ ಸೆಕ್ಟರ ಅಧಿಕಾರಿ, ಖರ್ಚುವೆಚ್ಚ ತಂಡ, ನೀತಿ ಸಂಹಿತೆ ಪಾಲನಾ ತಂಡ, ಪೊಲೀಸ್ ಸಿಬ್ಬಂದಿಗಳಿಗೆ ಹಾಗೂ ಮತಗಟ್ಟೆ ಮತ್ತು ಸಹಾಯಕ ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ ನೀಡಲಾಗಿದೆ ಎಂದು ತಿಳಿಸಿದರು.

ಜಿಲ್ಲಾ ದೂರು ನಿರ್ವಹಣಾ ಕೇಂದ್ರದ ದೂರವಾಣಿ ಸಂಖ್ಯೆ 1950 ಮೂಲಕ ಒಟ್ಟು 376 ಸ್ವೀಕೃತಗೊಂಡಿದ್ದು, ಎಲ್ಲ ದೂರುಗಳನ್ನು ಇತ್ಯರ್ಥಪಡಿಸಲಾಗಿದೆ. 85 ವರ್ಷ ಮೇಲ್ಪಟ್ಟ ಗೈರು ಹಾಜರಿ ಮತದಾರರು 13467 ಇದ್ದರೆ, ವಿಕಲಚೇತನ ಗೈರು ಹಾಜರಿ ಮತದಾರರು 26553 ಇದ್ದಾರೆ. ಸಿ-ವಿಜಿಲ್ ಮೂಲಕ ಬಂದ 3279 ದೂರುಗಳನ್ನು ಇತ್ಯರ್ಥಪಡಿಸಲಾಗಿದೆ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ, ಜಿ.ಪಂ ಮುಖ್ಯ ಕಾರ್ಯನಿರ್ವಾಹಕರು ಆಗಿರುವ ಜಿಲ್ಲಾ ಎಂಸಿಸಿ ನೋಡಲ್ ಅಧಿಕಾರಿ ಶಶಿಧರ ಕುರೇರ, ಅಪರ ಜಿಲ್ಲಾಧಿಕಾರಿ ಪರಶುರಾಮ ಶಿನ್ನಾಳಕರ, ಚುನಾವಣಾ ತಹಶೀಲ್ದಾರ ಪಂಪಯ್ಯ ಉಪಸ್ಥಿತರಿದ್ದರು.

 

Most Popular

To Top
error: Content is protected !!