ಸಿಂದಗಿ: ಸಂವಿಧಾನವನ್ನೇ ತಿದ್ದುಪಡಿ ಮಾಡುತ್ತೇವೆ.. ಎಂದು ಹೇಳಿರುವ ಉತ್ತರ ಕನ್ನಡ ಜಿಲ್ಲೆಯ ಸಂಸದ ಅನಂತ್ ಕುಮಾರ್ ಹೆಗಡೆ ಅವರ ನಡೆಯನ್ನು ಖಂಡಿಸಿ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ವತಿಯಿಂದ ಪಟ್ಟಣದ ಅಂಬೇಡ್ಕರ್ ವೃತ್ತದ ಎದುರು ಪ್ರತಿಭಟನೆ ಮಾಡಲಾಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಒಕ್ಕೂಟದ ತಾಲೂಕ ಅಧ್ಯಕ್ಷ ಷಹಜಹಾನ ಗೋಲಗೇರಿ ಮಾತನಾಡಿ, ಸಂವಿಧಾನ ವಿರೋಧಿ ಹೇಳಿಕೆ ನೀಡಿರುವ ಸಂಸದ ಅನಂತಕುಮಾರ ಹೆಗಡೆ ಅವರನ್ನು ಈ ಕೂಡಲೇ ಅಮಾನತ್ತು ಮಾಡಬೇಕು, ದೇಶದ ಪವಿತ್ರ ಗ್ರಂಥ ಎಂದು ನಂಬಿರುವ. ಭಾರತದ ಸಂವಿಧಾನದ ಬಗ್ಗೆ ಭಾಳ ಹಗೂರವಾಗಿ ಮಾತನಾಡಿದ ಹಾಗೂ ಸಮಾಜದಲ್ಲಿ ಶಾಂತಿಯನ್ನು ಕದಡಿಸುವ ಕೆಲಸ ಮತ್ತು ಸಮಾಜದಲ್ಲಿ ವಿಷಬೀಜ ಬಿತ್ತುವ ಕಲಸವನ್ನು ಮಾಡುತ್ತಿರುವ ಉತ್ತರಕನ್ನಡ ಜಿಲ್ಲೆ ಸಂಸದ ಅನಂತಕುಮಾರ ಹೆಗಡೆ ಅವರನ್ನು ಈ ಕೂಡಲೇ ಭಂದಿಸಿ ಕಾನೂನು ರೀತಿಯಲ್ಲಿ ಕ್ರಮ ನಿರ್ಮಿಸಬೇಕು ಎಂದು ಆಗ್ರಹಿಸಿದರು.
ಬಳಿಕ ತಾಲೂಕು ದಂಡಾಧಿಕಾರಿಗಳ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ಈ ಪ್ರತಿಭಟನೆಯಲ್ಲಿ ಒಕ್ಕೂಟದ ಉಪಾಧ್ಯಕ್ಷ ಸಿದ್ದು ಚಾವರ್ ಹಾಗೂ ಪ್ರಧಾನ ಕಾರ್ಯದರ್ಶಿ ಹುಸೇನ್ ಆಳಂದ್ . ಸಂಗಮೇಶ್ ಮನಗೂಳಿ. ರವಿ ಬಂಡ್ಗಾರ. ಸಿದ್ದು ಬೊಮ್ಮನಜೋಗಿ ಹಾಗೂ ಓSUI ಕಾರ್ಯಕರ್ತರದ ಪಾಣೀಸಾಬ ಆಶಾದ ಜಾವೀದ್ ಬಂದೇನವಾಜ್. ಸುನಿಲ್ ಹಾಗೂ ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು ಹಾಗೂ ತಾಲೂಕು ದಂಡಾಧಿಕಾರಿಗಳ ಮೂಲಕ ರಾಜ್ಯಪಾಲರನ್ನು ಮನವಿಯನ್ನು ಸಲ್ಲಿಸಲಾಯಿತು.