Gummata Nagari

Bijapur

ಸಾತ್ವಿಕನ ರಕ್ಷಿಸಿದ ತಾಲೂಕು ಅಧಿಕಾರಿಗಳಿಗೆ ಬಂಥನಾಳ ಶ್ರೀಗಳಿಂದ ಸನ್ಮಾನ

 

ಇಂಡಿ : ತಾಲೂಕಿನ ಸುಕ್ಷೇತ್ರ ಬಂಥನಾಳದಲ್ಲಿ ಶ್ರೀ ವೃಷಭಲಿಂಗೇಶ್ವರ ಸಂಸ್ಥಾನ ಮಠದ ವತಿಯಿಂದ ಈಚೆಗೆ ಲಚ್ಯಾಣ ಗ್ರಾಮದ ಜಮೀನಿನಲ್ಲಿ ತೆರೆದ ಕೊಳವೆ ಬಾವಿಗೆ ಬಿದ್ದ ಬಾಲಕ ಸಾತ್ವಿಕ ಮುಜಗೊಂಡನ ರಕ್ಷಣೆಗೆ ಶ್ರಮಿಸಿದ ತಾಲೂಕು ಮಟ್ಟದ ಅಧಿಕಾರಿಗಳನ್ನು ಗುರುವಾರದಂದು ಬಂಥನಾಳ ಹಾಗೂ ಲಚ್ಯಾಣ ಮಠದ ಪೀಠಾಧೀಶರಾದ ಶ್ರೀ ಡಾ. ವೃಷಭಲಿಂಗ ಮಹಾಶಿವಯೋಗಿಗಳು ಸನ್ಮಾನಿಸಿ ಗೌರವಿಸಿದರು.


ಸಂಜೆ ನಡೆದ ಸನ್ಮಾನ ಸಮಾರಂಭದಲ್ಲಿ ಇಂಡಿ ತಹಶೀಲ್ದಾರ ಮಂಜುಳಾ ನಾಯಕ ಉಪವಿಭಾಗಾಧಿಕಾರಿ ಅಬೀದ್ ಗದ್ಯಾಳ, ತಾಲೂಕು ಆರೋಗ್ಯ ಅಧಿಕಾರಿ ಅರ್ಚನಾ ಕುಲಕರ್ಣಿ, ಚೈತ್ರಾ ಬಜಂತ್ರಿ, ಸಿಡಿಪಿಯು, ಪೊಲೀಸ್ ಇಲಾಖೆ, ಅಗ್ನಿಶಾಮಕ ದಳದ ಅಧಿಕಾರಿಗಳನ್ನು ಸನ್ಮಾನಿಸಲಾಯಿತು.
ತುಂಗಳ ಮಾತೋಶ್ರೀ ಅನುಸೂಯಾದೇವಿ ಅಮ್ಮನವರು, ತಡವಲಗಾದ ಅಭಿನವ ರಾಚೋಟೇಶ್ವರ ಶಿವಾಚಾರ್ಯರು ಈ ಕಾರ್ಯಕ್ರಮದ ಸಾನಿಧ್ಯವಹಿಸಿದ್ದರು.

ವೃತ್ತ ಪ್ರಾಚಾರ್ಯ ಎ.ಪಿ. ಕಾಗವಾಡ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

 

 

Most Popular

To Top
error: Content is protected !!