ಬಿಜಾಪುರ: ಬಸವ ಜನ್ಮಸ್ಥಳ ಬಸವನಬಾಗೇವಾಡಿ ಅಭಿರುದ್ಧಿ ಪ್ರಾಧಿಕಾರವನ್ನು ರಚನೆ ಮಾಡಿದಕ್ಕೆ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ಕಾವೇರಿ ನಿವಾಸದಲ್ಲಿ ಜವಳಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಗೆ ವಿಶ್ವಗುರು ಬಸವಣ್ಣನವರ ಬೆಳ್ಳಿ ಮೂರ್ತಿಯನ್ನು ಬಸವನಬಾಗೇವಾಡಿಯ ಶ್ರೀ ಬಸವೇಶ್ವರ ಸೇವಾ ಸಮಿತಿ ವತಿಯಿಂದ ಕೊಟ್ಟು ಸನ್ಮಾನಿಸಲಾಯಿತು.
ಇದೇ ಸಂದರ್ಬದಲ್ಲಿ ಮುಂಬರುವ ಬಸವ ಜಯಂತಿ ಕಾರ್ಯಕ್ರಮಕ್ಕೆ ಬಸವನಬಾಗೇವಾಡಿಗೆ ಮುಖ್ಯಮಂತ್ರಿಗಳಿಗೆ ಆಮಂತ್ರಿಸಲಾಯಿತು. ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ವಿರಕ್ತಮಠದ ಶ್ರೀ ಶಿದ್ಧಲಿಂಗ ಸ್ವಾಮೀಜಿ ,ಬಸವೇಶ್ವರ ಸೇವಾ ಸಮಿತಿಯ ಅಧ್ಯಕ್ಷ ಈರಣ್ಣ ಪಟ್ಟಣಶೆಟ್ಟಿ ರಾಷ್ಟ್ರೀಯ ಬಸವಸೈನ್ಯದ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ, ಮುಖಂಡರಾದ ಸಂಗಮೇಶ ಓಲೇಕಾರ, ಸಂಗಣ್ಣ ಕಲ್ಲೂರ, ಶೇಖರ ಗೊಳಸಂಗಿ, ಬಸವರಾಜ ಹಾರಿವಾಳ, ರವಿ ರಾಠೋಡ, ಅನೀಲ ಅಗರವಾಲ, ಮಾಂತೇಶ ಆಡಿಗೊಂಡ, ಸುಭಾಷ ಚಿಕ್ಕೊಂಡ, ಬಸವರಾಜ ಗೊಳಸಂಗಿ, ಸಂಕನಗೌಡ ಪಾಟೀಲ, ಬಸವರಾಜ ಕೋಟಿ ಹಾಗೂ ಶೇಖರಗೌಡ ಪಾಟೀಲ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.